ಬೆಂಗಳೂರು:ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದೆ.
ರೈಲಿನ ಮೇಲ್ಬಾಗದಲ್ಲಿ ಶವ ಪತ್ತೆಯಾಗಿದ್ದು, ಮೃತದೇಹ ಕಂಡ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಮೃತ ಯುವಕನ ವಯಸ್ಸು ಸುಮಾರು 25 ರಿಂದ 30 ಎಂದು ಅಂದಾಜಿಸಲಾಗಿದೆ. ಯಾರೋ ಕೊಲೆ ಮಾಡಿರಬಹುದು ಎಂದು ರೈಲ್ವೇ ಪೊಲೀಸರು ಶಂಕಿಸಿದ್ದಾರೆ. ಮೃತ ಯುವಕ ಯಾರೆಂದು ಇನ್ನೂ ಮಾಹಿತಿ ದೊರೆತಿಲ್ಲ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.