ಕರ್ನಾಟಕ

karnataka

ETV Bharat / state

ಶಾಸಕಿ ಸೌಮ್ಯ ರೆಡ್ಡಿ ವಿರುದ್ಧದ ಎಫ್‌ಐಆರ್‌ ರದ್ದುಗೊಳಿಸುವಂತೆ ಕರ್ನಾಟಕ ರೆಡ್ಡಿ ಸಂಘ ಆಗ್ರಹ

ಶಾಸಕಿ ಸೌಮ್ಯ ರೆಡ್ಡಿ ವಿರುದ್ಧದ ಎಫ್‌ಐಆರ್‌ ರದ್ದುಗೊಳಿಸುವಂತೆ ಕರ್ನಾಟಕ ರೆಡ್ಡಿ ಜನ ಸಂಘ ಆಗ್ರಹಿಸಿದೆ.

By

Published : Jan 26, 2021, 2:31 PM IST

MLA Soumya Reddy FIR, MLA Soumya Reddy FIR cancellation, Urge for MLA Soumya Reddy FIR cancellation, MLA Soumya Reddy, MLA Soumya Reddy news, ಶಾಸಕಿ ಸೌಮ್ಯ ರೆಡ್ಡಿ ಎಫ್‌ಐಆರ್‌, ಶಾಸಕಿ ಸೌಮ್ಯ ರೆಡ್ಡಿ ಎಫ್‌ಐಆರ್‌ ರದ್ದುಗೊಳಿಸುವಂತೆ ಆಗ್ರಹ, ಶಾಸಕಿ ಸೌಮ್ಯ ರೆಡ್ಡಿ, ಶಾಸಕಿ ಸೌಮ್ಯ ರೆಡ್ಡಿ ಸುದ್ದಿ,
ಶಾಸಕಿ ಸೌಮ್ಯ ರೆಡ್ಡಿಯ ಎಫ್‌ಐಆರ್‌ ರದ್ದುಗೊಳಿಸುವಂತೆ ಆಗ್ರಹ

ಬೆಂಗಳೂರು :ಬಿಜೆಪಿ ಸರ್ಕಾರವು ಕುತಂತ್ರ ರಾಜಕಾರಣದ ಮೂಲಕ ಮಹಿಳಾ ಶಾಸಕಿ ಸೌಮ್ಯರೆಡ್ಡಿ ಅವರ ಮೇಲೆ ಸುಳ್ಳು ದೂರನ್ನು ದಾಖಲಿಸಿ ಎಫ್.‌ಐ.ಆರ್‌ ನಮೂದಿಸಿದೆ ಎಂದು ಕರ್ನಾಟಕ ರೆಡ್ಡಿ ಜನ ಸಂಘ ಆರೋಪಿಸಿದೆ. ಉನ್ನತ ಮಟ್ಟದ ತನಿಖೆ ನಡೆಸಿ ಘಟನೆಗೆ ಕಾರಣರಾದ ಪೊಲೀಸ್‌ ಸಿಬ್ಬಂದಿ ಮೇಲೆ ಕ್ರಮ ಜರುಗಿಸಿ ಎಂದು ಒತ್ತಾಯಿಸಿದೆ.

ಶಾಸಕಿ ಸೌಮ್ಯ ರೆಡ್ಡಿಯ ಎಫ್‌ಐಆರ್‌ ರದ್ದುಗೊಳಿಸುವಂತೆ ಕರ್ನಾಟಕ ರೆಡ್ಡಿ ಸಂಘ ಆಗ್ರಹ

ರೈತರ ಹೋರಾಟದ ಸಂದರ್ಭದಲ್ಲಿ ನಡೆದ ತಳ್ಳಾಟದಲ್ಲಿ ಮಹಿಳಾ ಶಾಸಕಿ ಸೌಮ್ಯರೆಡ್ಡಿ ಮತ್ತು ಇತರ ಶಾಸಕರು ಪ್ರತಿಭಟನೆಯಲ್ಲಿ ಮುನ್ನಡೆಯುತ್ತಿದ್ದಾಗ ಮಹಿಳಾ ಪೊಲೀಸ್‌ ಕಾನ್ಸ್​ಟೇಬಲ್​ಗಳು ಹಾಗೂ ಪೊಲೀಸ್‌ ಸಿಬ್ಬಂದಿ ಅತ್ಯಂತ ಕೆಟ್ಟ ರೀತಿಯಲ್ಲಿ ವರ್ತಿಸಿದ್ದಾರೆ. ನೆಲಕ್ಕೆ ತಳ್ಳಿ ಎಳೆದಾಡಿ ಅವಮಾನಿಸಿರುವ ಚಿತ್ರಗಳು ಲಭ್ಯವಿದ್ದರೂ ಸಂಬಂಧಪಟ್ಟ ಅಧಿಕಾರಿಯ ಮೇಲೆ ಯಾವುದೇ ಕ್ರಮ ಜರುಗಿಸಿಲ್ಲ. ಅಲ್ಲದೆ, ಹೋರಾಟ ನಡೆದ 2 ದಿನಗಳ ನಂತರ ಎಫ್.‌ಐ.ಆರ್‌ ದಾಖಲಿಸಿ ಕುತಂತ್ರ ರಾಜಕಾರಣ ಮಾಡುವ ಮೂಲಕ ಮಹಿಳಾ ಶಾಸಕಿಗೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಸುಳ್ಳ ಎಫ್‌ಐಆರ್‌ ದಾಖಲಿಸಲಾಗಿರುವುದು ಸರಿಯಲ್ಲ ಎಂದು ಕರ್ನಾಟಕ ರೆಡ್ಡಿ ಜನ ಸಂಘದ ಪ್ರಧಾನ ಕಾರ್ಯದರ್ಶಿ ಕೃಷ್ಣಾ ರೆಡ್ಡಿ ಕೆ.ಎನ್‌ ಪತ್ರದಲ್ಲಿ ತಿಳಿಸಿದ್ದಾರೆ.

ಶಾಸಕಿ ಸೌಮ್ಯ ರೆಡ್ಡಿಯ ಎಫ್‌ಐಆರ್‌ ರದ್ದುಗೊಳಿಸುವಂತೆ ಕರ್ನಾಟಕ ರೆಡ್ಡಿ ಸಂಘ ಆಗ್ರಹ

ಈ ಸುಳ್ಳು ಎಫ್‌ಐಆರ್‌ ದಾಖಲಿಸಿರುವುದನ್ನು ಕೂಡಲೇ ರದ್ದುಗೊಳಿಸಬೇಕು. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ಘಟನೆಗೆ ಕಾರಣರಾದ ಪೊಲೀಸ್‌ ಸಿಬ್ಬಂದಿ ಮತ್ತು ಇತರರ ಮೇಲೆ ಕ್ರಮ ಜರುಗಿಸಬೇಕೆಂದು ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳಲ್ಲಿ ಕರ್ನಾಟಕ ರೆಡ್ಡಿ ಜನ ಸಂಘ ಆಗ್ರಹಿಸಿದೆ.

ಈ ಬಗ್ಗೆ ಸೂಕ್ತ ಆದೇಶ ಹೊರಡಿಸಿ ನ್ಯಾಯ ದೊರಕಿಸಿಕೊಡಬೇಕೆಂದು ಕೋರುತ್ತೇವೆ. ತಪ್ಪಿದಲ್ಲಿ ಕರ್ನಾಟಕ ರೆಡ್ಡಿ ಜನಸಂಘ ರಾಜ್ಯಾದ್ಯಂತ ಹೋರಾಟವನ್ನು ಹಮ್ಮಿಕೊಳ್ಳಲಿದೆ ಎಂದು ಕರ್ನಾಟಕ ರೆಡ್ಡಿ ಜನ ಸಂಘದ ಅಧ್ಯಕ್ಷ ಎಸ್‌. ಜಯರಾಮ್‌ ರೆಡ್ಡಿ, ಉಪಾಧ್ಯಕ್ಷ ವಿ ವೆಂಕಟಶಿವಾರೆಡ್ಡಿ, ಎ.ಆರ್‌ ಶಿವರಾಮ್‌ ಹಾಗೂ ಎಲ್ಲಾ ಆಡಳಿತ ಮಂಡಳಿ ಸದಸ್ಯರು ಎಚ್ಚರಿಕೆಯನ್ನು ನೀಡಿದ್ದಾರೆ.

ABOUT THE AUTHOR

...view details