ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಪಡೆ ಅಧ್ಯಕ್ಷರನ್ನಾಗಿ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ್ ನೇಮಕವನ್ನು ಸದನದಲ್ಲಿ ಆಡಳಿತ ಪಕ್ಷದ ಸದಸ್ಯರೇ ಪ್ರಶ್ನಿಸುವ ಮೂಲಕ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಘಟನೆ ಇಂದು ವಿಧಾನ ಪರಿಷತ್ನಲ್ಲಿ ನಡೆಯಿತು.
ಬಿಜೆಪಿ ಸದಸ್ಯ ಹೆಚ್ ವಿಶ್ವನಾಥ್ ಅವರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಯಾವ ಮೊರಾಲಿಟಿ ಮೇಲೆ ನೇಮಕ ಮಾಡಿದ್ದೀರಿ, ಕೂಡಲೇ ಅವರನ್ನು ಬದಲಾಯಿಸಿ ಎಂದು ಒತ್ತಾಯಿಸಿ ಸರ್ಕಾರಕ್ಕೆ ಮುಜುಗರವನ್ನುಂಟು ಮಾಡಿದರು.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದ ವೇಳೆ ಮಹಾಂತೇಶ್ ಕವಟಗಿಮಠ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, 34 ವರ್ಷದ ನಂತರ ರಾಷ್ಟ್ರೀಯ ಶಿಕ್ಷಣ ನೀತಿ ಬದಲಾಗಿದೆ. ನಮ್ಮ ರಾಜ್ಯದಲ್ಲಿ ಕಾರ್ಯರೂಪಕ್ಕೆ ತರಲು ಕಾರ್ಯಪಡೆ ರಚಿಸಲಾಗಿದೆ. ಯಾವ ರೀತಿ ನೀತಿಯನ್ನು ಕಾರ್ಯರೂಪಕ್ಕೆ ತರಬೇಕು ಎಂದು ಅನುಷ್ಠಾನ ಯೋಜನೆಯ ರೂಪುರೇಷೆಗಳನ್ನು ಕಾರ್ಯಪಡೆ ನೀಡಿದೆ. ಅದರ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. 2021ಕ್ಕೆ ಶಿಕ್ಷಣ ನೀತಿಯನ್ನು ಅನುಷ್ಠಾನ ಮಾಡಲಾಗುತ್ತದೆ. ಹಂತ ಹಂತವಾಗಿ ಕಾರ್ಯರೂಪಕ್ಕೆ ತರಲಾಗುತ್ತದೆ. ವ್ಯವಸ್ಥಿತವಾಗಿ ಕಾಯ್ದೆ ಮೂಲಕ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುತ್ತೇನೆ. ಪ್ರಾಥಮಿಕ, ಪ್ರೌಢ, ಉನ್ನತ ಶಿಕ್ಷಣ ಎರಡೂ ಇಲಾಖೆ ಜೊತೆ ಜೊತೆಯಾಗಿ ಅನುಷ್ಠಾನ ಮಾಡಲಿದ್ದೇವೆ ಎಂದರು.
ಶಿಕ್ಷಣ ಆಯೋಗ ರಚನೆ ಮಾಡಿದ್ದು, ಸಿಎಂ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗುತ್ತಿದೆ. ಪ್ರೌಢ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆಯ ಇಬ್ಬರು ಸಚಿವರು ಉಪಾಧ್ಯಕ್ಷರಾಗಿರಲಿದ್ದಾರೆ.
ಐದು ವರ್ಷದ ಟಾರ್ಗೆಟ್ ಇರಿಸಿಕೊಂಡಿದ್ದೇವೆ. ಪ್ರೀ ನರ್ಸರಿಯಿಂದ ನೂತನ ಶಿಕ್ಷಣ ನೀತಿ ಅಳವಡಿಕೆ ಮಾಡಲಾಗುತ್ತದೆ ಎಂದರು.
ಈ ವೇಳೆ ಮಾತನಾಡಿದ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್, ಆರ್ಥಿಕ ಅಪರಾಧ ಹೊತ್ತ ಕಾಫಿ ಡೇ ಮಾಲೀಕರಿಗೂ ಕಾರ್ಯಪಡೆ ಅಧ್ಯಕ್ಷರಿಗೂ ಸಂಬಂಧ ಇದೆ. ಆರ್ಥಿಕ ಅಪರಾಧ ಎದುರಿಸುತ್ತಿರುವ ಕಂಪನಿಯ ಜೊತೆ ಸಂಬಂಧ ಇರುವ ಎಸ್.ವಿ. ರಂಗನಾಥ್ ಅವರನ್ನು ಯಾಕೆ ನೇಮಕ ಮಾಡಿದ್ದೀರಿ? ಯಾವ ಮೊರಾಲಿಟಿ ಮೇಲೆ ನೇಮಿಸಿದ್ದೀರಿ? ಬೇರೆ ಯಾರು ಇರಲಿಲ್ಲವೇ? ಶಿಕ್ಷಣ ಅಪವಿತ್ರ, ಆರ್ಥಿಕ ಅಪರಾಧದ ಹಿನ್ನೆಲೆಯಿರುವ ವ್ಯಕ್ತಿಯನ್ನು ಬದಲಿಸಿ ಬೇರೆಯವರನ್ನು ನೇಮಕ ಮಾಡಿ ಎಂದು ಒತ್ತಾಯಿಸಿದರು.
ಬಿಜೆಪಿ ಸದಸ್ಯ ವಿಶ್ವನಾಥ್ ಹೇಳಿಕೆಯನ್ನು ಪ್ರತಿಪಕ್ಷ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಕಾಂಗ್ರೆಸ್ ಸದಸ್ಯ ಹರಿಪ್ರಸಾದ್ ಅವರು ಮಾತನಾಡಿ, ವಿಶ್ವನಾಥ್ ಹೇಳಿಕೆ ಸ್ವಾಗತಾರ್ಹ. ನಾನು ಹಿಂದಿ ಮಾತನಾಡುತ್ತೇನೆ, ಆದರೆ ಯಾರೂ ನನ್ನ ಮೇಲೆ ಹಿಂದಿ ಹೇರಲು ಸಾಧ್ಯವಿಲ್ಲ. ಇದು ಮಕ್ಕಳ ಭವಿಷ್ಯದ ವಿಷಯ, ಭಾಷೆಯ ವಿಚಾರದಲ್ಲಿ ಚರ್ಚಿಸಬೇಕು ಎಂದರು.
ಇದಕ್ಕೆ ಉತ್ತರ ನೀಡಿದ ಡಿಸಿಎಂ, ಭಾಷೆ ಬಗ್ಗೆ ತಕರಾರು ಇಲ್ಲ. ಮಾತೃಭಾಷೆಯಲ್ಲಿ ಕನಿಷ್ಠ 5 ನೇ ತರಗತಿವರೆಗೆ ಶಿಕ್ಷಣ ಕಡ್ಡಾಯ, 8 ರವರೆಗೆ ವಿಸ್ತರಿಸುವ ಚಿಂತನೆ ಇದೆ. ಆದರೆ ಹಿಂದಿ ಹೇರಿಕೆ ಪ್ರಶ್ನೆಯೇ ಇಲ್ಲ. ಅಗ್ರ ಸ್ಥಾನ ಕನ್ನಡ ಭಾಷೆ, ಕನ್ನಡ ನಾಡು, ಕನ್ನಡದಲ್ಲೇ ಶಿಕ್ಷಣ ಕೊಡಬೇಕು ಎನ್ನುವುದೇ ಆಗಿದೆ ಎಂದು ಸ್ಪಷ್ಟಪಡಿಸಿದರು. ಎಸ್.ವಿ ರಂಗನಾಥ್ ಮೇಲೆ ಆಪಾದನೆ ಸರಿಯಲ್ಲ. ಅವರು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ, ಯಾವುದೇ ಆಪಾದನೆಗೆ ಒಳಗಾದವರಲ್ಲ. ಹಾಗಾಗಿ ವಿಶ್ವನಾಥ್ ಬಳಸಿರುವ ಪದವನ್ನು ಕಡತದಿಂದ ತೆಗೆದುಹಾಕಬೇಕು, ನಾಡಿಗೆ ಉತ್ತಮ ಕೊಡುಗೆ ಕೊಟ್ಟಿದ್ದಾರೆ, ಅರ್ಹತೆ ಆಧಾರದಲ್ಲೇ ನೇಮಕ ಮಾಡಲಾಗಿದೆ ಎಂದು ಡಿಸಿಎಂ ಸ್ಪಷ್ಟಪಡಿಸಿದರು.
ಮಹಾರಾಣಿ ಕ್ಲಸ್ಟರ್ ವಿವಿ ವಿಶೇಷಾಧಿಕಾರಿ ವಿರುದ್ಧ ತನಿಖೆ: