ಬೆಂಗಳೂರು: ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಎಂ. ಬಿ. ಪಾಟೀಲ್ ಮನವಿಗೆ ಸ್ಪಂದಿಸಿರುವ ಸಿಎಂ 140 ಕೋಟಿ ರೂ. ಗಳ ಯೋಜನೆಯನ್ನು ಕೃಷ್ಣಾ ಭಾಗ್ಯ ಜಲನಿಗಮದಿಂದ ಕಾಮಗಾರಿ ಕೈಗೆತ್ತಿಕೊಳ್ಳಲು ಆದೇಶ ಹೊರಡಿಸಿದ್ದಾರೆ.
ಇಂದು ಬೆಳಗ್ಗೆ ವಿಜಯಪುರ ಜಿಲ್ಲೆಯ ಇಂಡಿ ಭಾಗದ 16 ಕೆರೆಗಳಿಗೆ ತಿಡಗುಂದಿ ಅಕ್ವಾಡಕ್ಟ ಕಾಲುವೆ ಮೂಲಕ ನೀರು ತುಂಬಿಸುವ ಯೋಜನೆಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಎಂ. ಬಿ. ಪಾಟೀಲ್ ಸಿಎಂರನ್ನು ಭೇಟಿ ಮಾಡಿ, ಬೇಡಿಕೆ ಇಟ್ಟಿದ್ದರು. ಇದಕ್ಕೆ ಸ್ಪಂದಿಸಿರುವ ಸಿಎಂ 140 ಕೋಟಿ ರೂ.ಗಳ ಯೋಜನೆಯನ್ನು ಕೃಷ್ಣಾ ಭಾಗ್ಯ ಜಲನಿಗಮದಿಂದ ಕಾಮಗಾರಿ ಕೈಗೆತ್ತಿಕೊಳ್ಳಲು ಆದೇಶ ಹೊರಡಿಸಿದ್ದಾರೆ.
ಅನುದಾನ ಬಿಡುಗಡೆ ಆದೇಶ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅತ್ಯಂತ ಬರಪೀಡಿತ ಪ್ರದೇಶದಲ್ಲಿ 16 ಕೆರೆಗಳನ್ನು ತುಂಬಿಸುವ ಯೋಜನೆ ಕಾಮಗಾರಿ ಮಾತ್ರ ಬಾಕಿ ಉಳಿದಿತ್ತು. ಆರ್ಥಿಕ ಅನುಮೋದನೆ ಇಲ್ಲದ ಕಾರಣ ಕಾಮಗಾರಿ ಆರಂಭಗೊಂಡಿರಲಿಲ್ಲ. ಶುಕ್ರವಾರ ಬೆಳಗ್ಗೆ ಸಿಎಂ ಯಡಿಯೂರಪ್ಪನವರನ್ನು ಭೇಟಿ ಮಾಡಿ, ರೈತರ ಹಿತದೃಷ್ಠಿಯಿಂದ ಕೂಡಲೇ ಆರ್ಥಿಕ ಅನುದಾನ ಬಿಡುಗಡೆಗೊಳಿಸುವಂತೆ ವಿನಂತಿಸಿದ್ದರು. ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ ಸಿಎಂ ಸಂಜೆ ವೇಳೆಗೆ ಅನುದಾನ ಬಿಡುಗಡೆ ಆದೇಶ ಹೊರಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.