ಬೆಂಗಳೂರು:ಪಂಚರಾಜ್ಯ ಚುನಾವಣೆ ಫಲಿತಾಂಶ ನಕಾರಾತ್ಮಕವಾಗಿ ಬಂದಿದ್ದರೂ, ಪಕ್ಷಕ್ಕೆ ಸಕಾರಾತ್ಮಕವಾಗಿ ಹಲವು ಅಂಶಗಳು ಲಭಿಸಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾದಲ್ಲಿ ಕೇವಲ ಇಬ್ಬರು ಶಾಸಕರು ಇದ್ದರು. ಆದರೂ 12 ಸ್ಥಾನ ಗೆದ್ದಿದ್ದೇವೆ. ಬಿಜೆಪಿಗೆ ಶೇ.37ರಷ್ಟು ಮತಗಳು ಮಾತ್ರ ಬಿದ್ದಿದೆ. ಆಪ್, ಟಿಎಂಸಿಗೆ ಮತ ವಿಭಜನೆಯಾಗಿ ಈ ಫಲಿತಾಂಶ ಬಂದಿದೆ. ಉತ್ತರ ಪ್ರದೇಶದಲ್ಲಿ ಸೋತಿದ್ದರೂ. ನಮ್ಮ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಎಲ್ಲ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದಾರೆ ಎಂದು ಸಮರ್ಥಿಸಿಕೊಂಡರು.
ನಾವು ವಿಫಲವಾಗಿರುವುದು ಪಂಜಾಬ್ನಲ್ಲಿ ಮಾತ್ರ. ನಮ್ಮ ಕೆಲವು ಆಂತರಿಕ ವಿಚಾರದಿಂದ ಹಿನ್ನೆಡೆಯಾಗಿದೆ. ಆದರೆ ನನಗೆ ರಾಜ್ಯದ ಜನರ ಮೇಲೆ ನಂಬಿಕೆ ಇದೆ. ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಕೇರಳದಲ್ಲಿ ನಾವು ಇಲ್ಲದಿದ್ದರೂ, ಬಿಜೆಪಿ ಕೂಡ ಇಲ್ಲ ಎಂದರು.