ದೇವನಹಳ್ಳಿ: ಕರ್ನಾಟಕದಿಂದ ಆಯ್ಕೆಯಾದ ನಾಲ್ವರು ನೂತನ ಕೇಂದ್ರ ಸಚಿವರಿಗೆ ಅಭಿನಂದನೆ ಕೋರಲು ದೆಹಲಿಗೆ ಹೋಗಿದ್ದೆವು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್ ತಿಳಿಸಿದರು.
ದೆಹಲಿಯಿಂದ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಡೂರು ಬಿಜೆಪಿ ಶಾಸಕ ಬೆಳ್ಳಿ ಪ್ರಕಾಶ್ ಜೊತೆ ಅವರು ಆಗಮಿಸಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ, ನೂತನವಾಗಿ ಕೇಂದ್ರ ಸಚಿವರಾದವರಿಗೆ ಶುಭ ಕೋರಿ ಬಂದಿದ್ದೀವಿ ಎಂದರು.