ಬೆಂಗಳೂರು:ಜೇಮ್ಸ್ ಚಿತ್ರದ ಬಗ್ಗೆ ಏನೇ ಸಮಸ್ಯೆ ಇದ್ದರೂ ಬಗೆಹರಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ನಟ ಶಿವರಾಜ್ ಕುಮಾರ್ ದಂಪತಿ ಇಂದು ಭೇಟಿಯಾಗಿ ಏಪ್ರಿಲ್ ಎರಡನೇ ವಾರದಲ್ಲಿ ಶಕ್ತಿಧಾಮ ಕಟ್ಟಡಗಳ ಉದ್ಘಾಟನೆಗೆ ಆಹ್ವಾನ ನೀಡಿದ್ದಾರೆ. ಈ ವೇಳೆ ಜೇಮ್ಸ್ ಚಿತ್ರದ ಬಗ್ಗೆ ವಿಶೇಷವಾದ ಚರ್ಚೆ ನಡೆದಿಲ್ಲ ಎಂದರು.
ಜೇಮ್ಸ್ ಚಿತ್ರದ ಬಗ್ಗೆ ಏನೇ ಸಮಸ್ಯೆ ಇದ್ದರೂ ಬಗೆಹರಿಸುತ್ತೇವೆ: ಸಿಎಂ ಬೊಮ್ಮಾಯಿ - ಜೇಮ್ಸ್ ಚಿತ್ರದ ಸಮಸ್ಯೆ ಕುರಿತಂತೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ
ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್ ಬಗ್ಗೆ ಯಾವುದೇ ಸಮಸ್ಯೆ ಇದ್ದರೂ ಬಗೆಹರಿಸುವ ಭರವಸೆಯನ್ನು ಸಿಎಂ ಬೊಮ್ಮಾಯಿ ನೀಡಿದ್ದಾರೆ.
![ಜೇಮ್ಸ್ ಚಿತ್ರದ ಬಗ್ಗೆ ಏನೇ ಸಮಸ್ಯೆ ಇದ್ದರೂ ಬಗೆಹರಿಸುತ್ತೇವೆ: ಸಿಎಂ ಬೊಮ್ಮಾಯಿ CM Bommai reaction on James movie problem](https://etvbharatimages.akamaized.net/etvbharat/prod-images/768-512-14820131-thumbnail-3x2-bngjpg.jpg)
ಜೇಮ್ಸ್ ಚಿತ್ರದ ಬಗ್ಗೆ ಏನೆ ಸಮಸ್ಯೆ ಬಂದ್ರ ಪರಿಹಾರದ ಭರವಸೆ ನೀಡಿದ ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
ಸಿನಿಮಾಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸುತ್ತೇವೆ. ತೊಂದರೆ ಇದ್ದರೆ ಚಲನಚಿತ್ರ ವಾಣಿಜ್ಯ ಮಂಡಳಿ ಸಂಪರ್ಕಿಸಿ ಎಂದು ಹೇಳಿದ್ದೇನೆ. ಈ ಬಗ್ಗೆ ಜೇಮ್ಸ್ ನಿರ್ಮಾಪಕರಿಗೆ ತಿಳಿಸಿದ್ದೇನೆ. ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಆ ವ್ಯವಸ್ಥೆ ಇದ್ದು, ಅಲ್ಲಿ ಚರ್ಚೆ ನಡೆಸಲಾಗುತ್ತದೆ. ಈ ಬಗ್ಗೆ ಏನೇ ಸಮಸ್ಯೆ ಇದ್ದರೂ ಬಗೆಹರಿಸಲಾಗುವುದು. ಈಗಾಗಲೇ ಚೇಂಬರ್ ಜೊತೆ ನಾನೂ ಮಾತನಾಡಿದ್ದೇನೆ. ಇನ್ನೊಮ್ಮೆ ಬೇಕಾದರೆ ಮಾತನಾಡುತ್ತೇನೆ. ಏನೇ ಸಮಸ್ಯೆ ಇದ್ದರೂ ಬಗೆಹರಿಸಲಾಗುತ್ತದೆ ಎಂದರು.
Last Updated : Mar 24, 2022, 1:49 PM IST