ಬೆಂಗಳೂರು: ಯಾವಾಗ ಬೇಕಾದ್ರೂ ಈ ಸರ್ಕಾರ ಬೀಳಬಹುದು. ನಾವಾಗಿ ಅವರ ಶಾಸಕರನ್ನು ಕರೀತಿಲ್ಲ. ಅವರಾಗಿ ಬಂದರೆ ನಾವು ಜವಾಬ್ದಾರರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಮತ್ತೆ ತಮ್ಮ ಸರ್ಕಾರ ರಚನೆಯ ಸುಳಿವು ಕೊಟ್ಟಿದ್ದಾರೆ.
ವಿಜಯನಗರದಲ್ಲಿ ನಡೆದ ಲೋಕಸಭಾ ಸದಸ್ಯರಿಗಾಗಿ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ದೊಡ್ಡ ಅಂತರದಿಂದ ಗೆದ್ದಿದ್ದೇವೆ. ಒಂದೇ ಒಂದು ಕೊರತೆ ಇದೆ. ಇಂಥ ಸಂದರ್ಭದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರಬೇಕಿತ್ತು ಅನ್ನೋ ಕೊರಗು ಅದು. ಬಿಜೆಪಿ ಸರ್ಕಾರ ರಚನೆ ಯಾವಾಗ ಅಂತ ಜನ ಹೋದಲ್ಲಿ ಬಂದಲ್ಲಿ ಕೇಳುತ್ತಿದ್ದಾರೆ. ಸರ್ಕಾರ ರಚನೆಗೆ ಕಾಲ ಕೂಡಿ ಬರಬೇಕು ಎಂದು ಸೂಚ್ಯವಾಗಿ ತಿಳಿಸಿದರು.
ರಾಜ್ಯದಲ್ಲಿ ಚುನಾವಣೆ ಯಾವಾಗ ಬೇಕಾದರೂ ಬರಲಿ. ಬೆಂಗಳೂರಿನಲ್ಲಿ 28 ವಿಧಾನಸಭಾ ಕ್ಷೇತ್ರಗಳಿವೆ . ಚುನಾವಣೆ ಯಾವಾಗಾದರೂ ಬರಲಿ, ನಾವು ಬೆಂಗಳೂರಿನಲ್ಲಿ 22 ಸ್ಥಾನ ಗೆಲ್ಲಬೇಕು. ಸಂಸದರು ಅದಕ್ಕೆ ಪಣ ತೊಡಬೇಕು ಎಂದು ಕರೆ ನೀಡಿದರು.
ಸಿಎಂ ಅಮೆರಿಕ ಪ್ರವಾಸಕ್ಕೆ ಕಿಡಿ: