ಕರ್ನಾಟಕ

karnataka

ETV Bharat / state

ಬಿಎಸ್​ವೈ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್​​ ಮಾಡಿದ ಜ್ಯೋತಿಷಿಗಳು - bsy oath

ಬಿಎಸ್​ವೈ ಪದಗ್ರಹಣವು ಜ್ಯೋತಿಷಿಗಳ ಸಲಹೆಯಂತೆ ನಡೆಯಲಿದ್ದು, ಜ್ಯೋತಿಷಿಗಳು ಎರಡು ಮುಹೂರ್ತ ನೀಡಿದ್ದಾರೆ. ಈ ಮುಹೂರ್ತದಲ್ಲೇ ಯಡಿಯೂರಪ್ಪ ಪದಗ್ರಹಣ ಮಾಡಲಿದ್ದಾರೆ ಎನ್ನಲಾಗ್ತಿದೆ.

ಬಿಎಸ್​ವೈ ಪದಗ್ರಹಣಕ್ಕೆ ಮುಹೂರ್ತ...ಸಂಪುಟ ರಚನೆಗೆ ಆಷಾಢ ಅಡ್ಡಿ?

By

Published : Jul 24, 2019, 10:48 AM IST

ಬೆಂಗಳೂರು:14 ತಿಂಗಳ ಬಳಿಕ ಕೊನೆಗೂ ದೋಸ್ತಿ ಸರ್ಕಾರ ಪತನವಾಗಿದೆ. ಸರ್ಕಾರ ರಚನೆಗೆ ಬಿಜೆಪಿ ಸಕಲ ಸಿದ್ಧತೆ ನಡೆಸಿದ್ದು, ಬಿ.ಎಸ್​. ಯಡಿಯೂರಪ್ಪ ಅವರ ಪದಗ್ರಹಣವು ಜ್ಯೋತಿಷಿಗಳ ಸಲಹೆಯಂತೆ ನಡೆಯಲಿದೆಯಂತೆ.

ಜ್ಯೋತಿಷಿಗಳು ಎರಡು ಮುಹೂರ್ತ ನೀಡಿದ್ದು, ಗುರುವಾರ ಮಧ್ಯಾಹ್ನ 3.28 ನಿಮಿಷದಿಂದ 3.48 ನಿಮಿಷದವರೆಗೆ ಅಥವಾ ಶುಕ್ರವಾರ ಸಂಜೆ 4 ಗಂಟೆಗೆ ಪ್ರಮಾಣವಚನ ಸ್ವೀಕರಿಸುವಂತೆ ತಿಳಿಸಿದ್ದಾರೆ. ಯಡಿಯೂರಪ್ಪ ಗುರುವಾರದ ಮುಹೂರ್ತದಲ್ಲಿ ಸಿಎಂ ಆಗಿ ಪದಗ್ರಹಣ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಬಿಜೆಪಿ ಕಚೇರಿಯಲ್ಲಿಂದು ಮಧ್ಯಾಹ್ನ 12ಗಂಟೆಗೆ ಪಕ್ಷದ ಶಾಸಕಾಂಗ ಸಭೆ ನಡೆಯಲಿದೆ. ಯಡಿಯೂರಪ್ಪ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಆಗಲಿದ್ದಾರೆ. ಸಭೆಯಲ್ಲಿ ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಹೆಚ್.ನಾಗೇಶ್ ಸಹ ಭಾಗಿಯಾಗುವ ಸಾಧ್ಯತೆಯಿದೆ. ಜೊತೆಗೆ ಸಭೆಯಲ್ಲಿ ರಾಜ್ಯಪಾಲರ ಭೇಟಿ ಬಗ್ಗೆ ನಿರ್ಧರಿಸಲಿದ್ದಾರೆ.

ಆಗಸ್ಟ್ 1ರವೆರೆಗೂ ಆಷಾಢ ಇರುವ ಹಿನ್ನೆಲೆ, ಸಚಿವ ಸಂಪುಟ‌‌ ರಚನೆ ಕುರಿತು ಜ್ಯೋತಿಷಿಗಳ ಸಲಹೆ ಪಡೆದು ಬಿಎಸ್​ವೈ ಮುಂದುವರೆಯಲಿದ್ದಾರೆ ಎಂದು ತಿಳಿದುಬಂದಿದೆ.

For All Latest Updates

TAGGED:

bsy oath

ABOUT THE AUTHOR

...view details