ಬೆಂಗಳೂರು:ಯಶವಂತಪುರ ಕ್ಷೇತ್ರದ ನಾಗದೇವನಹಳ್ಳಿ ಮತಗಟ್ಟೆಯ ಬಳಿ ಬಿಜೆಪಿ ಕಾರ್ಯಕರ್ತರು ಹಣ ಹಂಚುತ್ತಿದ್ದು, ಈ ವೇಳೆ ತನಗೆ ದುಡ್ಡು ಕೊಟ್ಟಿಲ್ಲ ಎಂದು ಮಹಿಳೆಯೋರ್ವರು ಆರೋಪಿಸಿದ್ದಾರೆ.
ಮತ ಚಲಾವಣೆ ಸಂದರ್ಭದಲ್ಲಿ ಮತದಾರರಿಗೆ ಬಿಜೆಪಿ ಕಾರ್ಯಕರ್ತರು ಹಣ ಹಂಚುತ್ತಿದ್ದಾಗ ಬಂದ ಮಹಿಳೆಯೊಬ್ಬರು ತನಗೂ ಹಣ ನೀಡುವಂತೆ ಕೇಳಿದ್ದಾರೆ. ಆದರೆ, ಕಾರ್ಯಕರ್ತರು ನಿರಾಕರಿಸಿದ ಪರಿಣಾಮ ಬೇರೆಯವರಿಗೆ ಹಣ ನೀಡಿದ್ದಾರೆ. ತನಗೆ ಹಣ ನೀಡಿಲ್ಲ ಎಂದು ಮಹಿಳೆ ಕಣ್ಣೀರು ಹಾಕುತ್ತಾ ಮತ ಚಲಾಯಿಸದೆ ಹಿಂತಿರುಗಿದ್ದಾರೆ. ಈ ವೇಳೆ ಅವರ ಸ್ನೇಹಿತೆಯನ್ನೂ ಜೊತೆಗೆ ಕರೆದುಕೊಂಡು ಹೋಗಿದ್ದಾರೆ.