ಕರ್ನಾಟಕ

karnataka

ETV Bharat / state

ಸ್ಕೂಟಿ ಸ್ಕಿಡ್‌ ಆಗಿದ್ದಕ್ಕೆ ಕರೆಂಟ್‌ ಕಂಬ ಹಿಡಿದ ಯುವತಿ ದಾರುಣ ಸಾವು: ಬೆಸ್ಕಾಂ ವಿರುದ್ಧ ಆಕ್ರೋಶ - ವೈಟ್ ಫೀಲ್ಡ್ ಪೊಲೀಸರು ಭೇಟಿ

ಬೈಕ್​ ಸ್ಕಿಡ್​ ಆಗಿದ್ದಕ್ಕೆ ಪಕ್ಕದಲ್ಲಿದ್ದ ವಿದ್ಯುತ್​ ಕಂಬ ಹಿಡಿದ ಯುವತಿಗೆ ವಿದ್ಯುತ್ ಸ್ಪರ್ಶಿಸಿ ದುರ್ಘಟನೆ ಸಂಭವಿಸಿದೆ.

young-woman-dies-due-to-electric-shock-in-bangalore
ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವತಿ ಸಾವು

By

Published : Sep 6, 2022, 9:51 AM IST

Updated : Sep 6, 2022, 12:41 PM IST

ಮಹದೇವಪುರ(ಬೆಂಗಳೂರು):ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವತಿ ಸಾವನ್ನಪ್ಪಿರುವ ಘಟನೆ ವೈಟ್​ಫೀಲ್ಡ್ ಠಾಣಾ ವ್ಯಾಪ್ತಿಯ ಸಿದ್ದಾಪುರದಲ್ಲಿ ನಿನ್ನೆ ನಡೆದಿದೆ. 23 ವರ್ಷದ ಅಕಿಲ ಮೃತಪಟ್ಟಿರುವ ಯುವತಿ. ಇವರು ಕೆಲಸ ಮುಗಿಸಿ ಮನೆಗೆ ಹೊರಡುವಾಗ ನೀರು ನಿಂತ ರಸ್ತೆಯಲ್ಲಿ ಸ್ಕೂಟಿ ಸ್ಕಿಡ್ ಆಗಿ ಬಿದ್ದಿದೆ. ಈ ಸಂದರ್ಭದಲ್ಲಿ ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬ ಹಿಡಿದಿದ್ದು, ಮೈಮೇಲೆ ವಿದ್ಯುತ್ ಹರಿದಿದೆ ಎಂದು ತಿಳಿದುಬಂದಿದೆ.

ಸೋಮವಾರ ರಾತ್ರಿ 9 ಗಂಟೆ ಸಮಯದಲ್ಲಿ ವೈಟ್ ಫೀಲ್ಡ್ -ಮಾರತಹಳ್ಳಿ ಮುಖ್ಯರಸ್ತೆಯ ಸಿದ್ದಾಪುರದಲ್ಲಿ ಘಟನೆ ನಡೆದಿದೆ. ಭಾರಿ ಮಳೆಯ ಕಾರಣ ರಸ್ತೆಯಲ್ಲಿ ನೀರು ನಿಂತಿತ್ತು. ಖಾಸಗಿ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಖಿಲಾ, ಸ್ಕೂಟಿಯಲ್ಲಿ ಮನೆಗೆ ಮರಳುತ್ತಿದ್ದರು.

ಸ್ಕೂಟಿ ಸ್ಕಿಡ್‌ ಆಗಿದ್ದಕ್ಕೆ ಕರೆಂಟ್‌ ಕಂಬ ಹಿಡಿದ ಯುವತಿ ದಾರುಣ ಸಾವು

ಕಂಬದಲ್ಲಿದ್ದ ವೈರ್​ಗಳು ತೆರೆದುಕೊಂಡಿವೆ. ವಿದ್ಯುತ್ ಕಂಬಗಳ ನಿರ್ವಹಣೆ ಸರಿಯಾಗಿ ಇಲ್ಲದೇ ಇರುವುದೇ ದುರ್ಘಟನೆಗೆ ಕಾರಣ ಎಂದು ಕುಟುಂಬಸ್ಥರು ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ವೈಟ್ ಫೀಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವೈದೇಹಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಮನೆ ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ :ಕೆಂಪೇಗೌಡ ಏರ್‌ಪೋರ್ಟ್​ ಪಿಕ್‌ಅಪ್ ಪಾಯಿಂಟ್​ನಲ್ಲಿ ಮಳೆನೀರು: ವಿಡಿಯೋ

Last Updated : Sep 6, 2022, 12:41 PM IST

ABOUT THE AUTHOR

...view details