ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಸುರೇಬಾನ ಪಂಚಾಯತ್ ವ್ಯಾಪ್ತಿಯ ಬೆನ್ನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ 40 ಜನರ ಪೈಕಿ ಚಿಕಿತ್ಸೆ ಫಲಕಾರಿಯಾದೇ ವೃದ್ಧರೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಕಲುಷಿತ ನೀರು ಸೇವಿಸಿ ಬೆನ್ನೂರ ಗ್ರಾಮದ ಸುಮಾರು 40ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು. ಅವರನ್ನು ರಾಮದುರ್ಗ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಕಳೆದ ರಾತ್ರಿ ಚಿಕಿತ್ಸೆ ಫಲಿಸದೇ ಬೆನ್ನೂರ ಗ್ರಾಮದ ಬಸಪ್ಪ ಖಾನಾಪೂರ (85)ಎಂಬುವರು ಸಾವನ್ನಪ್ಪಿದ್ದಾರೆ. ಉಳಿದವರಿಗೆ ಚಿಕಿತ್ಸೆ ಮುಂದುವರೆದಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.