ಕರ್ನಾಟಕ

karnataka

ETV Bharat / state

ಚಿಕ್ಕೋಡಿ ಭಾಗದ 6 ಸೇತುವೆಗಳು ಜಲಾವೃತ.. ಪರ್ಯಾಯ ಮಾರ್ಗಗಳತ್ತ ಜನರ ಚಿತ್ತ.. - ಮಹಾರಾಷ್ಟ್ರದ ಘಟ್ಟ ಪ್ರದೇಶದ ಚಿಕ್ಕೋಡಿ

ಮಳೆಯ ಅಬ್ಬರ ಹೆಚ್ಚಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಘಟ್ಟ ಪ್ರದೇಶದ ಚಿಕ್ಕೋಡಿ ಭಾಗದ ತಾಲೂಕಿನಲ್ಲಿ ಕೃಷ್ಣಾ ಹಾಗೂ ಉಪನದಿಗಳ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದ್ದು, ಕೆಳಹಂತದ 8 ಸೇತುವೆಗಳ ಪೈಕಿ 6 ಸೇತುವೆಗಳು ಮತ್ತೆ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ. ಇದರಿಂದಾಗಿ ಜನರು ಹತ್ತಾರು ಕಿ.ಮೀ ಸುತ್ತು ಬಳಸಿ ಪ್ರಯಾಣಿಸುವ ಅನಿವಾರ್ಯ ಎದುರಾಗಿದೆ.

ಚಿಕ್ಕೋಡಿ ಭಾಗದ 6 ಸೇತುವೆಗಳು ಜಲಾವೃತ

By

Published : Jul 31, 2019, 1:30 PM IST

ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಹೆಚ್ಚಾದ ಹಿನ್ನೆಲೆಯಲ್ಲಿ ಚಿಕ್ಕೋಡಿ ಭಾಗದ ತಾಲೂಕಿನಲ್ಲಿ ಕೃಷ್ಣಾ ಹಾಗೂ ಉಪನದಿಗಳ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದ್ದು, ಕೆಳಹಂತದ 8 ಸೇತುವೆ ಪೈಕಿ 6 ಸೇತುವೆಗಳು ಮತ್ತೆ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ.

ಚಿಕ್ಕೋಡಿ ಭಾಗದ 6 ಸೇತುವೆಗಳು ಜಲಾವೃತ..

ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ ಕೃಷ್ಣಾ ನದಿಗೆ 1ಲಕ್ಷಕ್ಕೂ ಹೆಚ್ಚು ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಹೀಗಾಗಿ, ಚಿಕ್ಕೋಡಿ ತಾಲೂಕಿನ ಕಲ್ಲೋಳ-ಯಡೂರ, ಕಾರದಗಾ-ಭೋಜ, ಭೋಜವಾಡಿ-ಕುನ್ನೂರ, ಸಿದ್ನಾಳ-ಅಕ್ಕೋಳ, ಜತ್ರಾಟ-ಭಿವಶಿ, ಮಲಿಕವಾಡ-ದತ್ತವಾಡ ಸೇತುವೆಗಳ ಮೇಲೆ ನೀರು ಹರಿಯುತ್ತಿದೆ. ಸೇತುವೆಗಳನ್ನು ಅವಲಂಬಿಸಿರುವ ಗ್ರಾಮಗಳ ಜನರಿಗೆ ಪರ್ಯಾಯ ಮಾರ್ಗಗಳು ಇರುವುದರಿಂದ ಜನರ ಪ್ರಯಾಣಕ್ಕೆ ಯಾವುದೇ ತೊಂದರೆ ಇಲ್ಲ. ಆದರೆ, ಹತ್ತಾರು ಕಿ.ಮೀ ಸುತ್ತುಬಳಸಿ ಪ್ರಯಾಣಿಸಬೇಕಾದ ಅನಿವಾರ್ಯ ಎದುರಾಗಿದೆ.


ನದಿ ತೀರದಲ್ಲಿ ಕಟ್ಟೆಚ್ಚರ :

ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಇನ್ನೂ ನೀರು ಹೊರಬಿಟ್ಟಿಲ್ಲ. ಆದರೆ, ವೇದಗಂಗಾ, ದೂಧಗಂಗಾ ಹಾಗೂ ಪಂಚಗಂಗಾ ನದಿಗಳ ಮೂಲಕ ಕೃಷ್ಣಾ ನದಿಗೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಮುಂದಿನ ಎರಡು-ಮೂರು ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇರುವ ಕಾರಣ ನದಿ ತೀರದ ತಗ್ಗು ಪ್ರದೇಶದಲ್ಲಿನ ನಿವಾಸಿಗಳನ್ನು ಬೇರೆಡೆ ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಪ್ರವಾಹ ಭೀತಿ ಇರುವ ಕಾರಣ ನದಿ ತೀರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಹಶೀಲ್ದಾರ್ ಡಾ. ಸಂತೋಷ್‌ಕುಮಾರ್‌ ಬಿರಾದಾರ ತಿಳಿಸಿದ್ದಾರೆ. ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಕ್ಷಣ ಕ್ಷಣಕ್ಕೂ ಏರಿಕೆ ಕಂಡು ಬರುತ್ತಿದೆ. ನದಿ ತೀರದ ಜನರು ಸದಾ ಜಾಗೃತರಾಗಿರಬೇಕು ಎಂದು ಚಿಕ್ಕೋಡಿ ವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ತಿಳಿಸಿದ್ದಾರೆ.

ABOUT THE AUTHOR

...view details