ಕರ್ನಾಟಕ

karnataka

ಕ್ಷುಲ್ಲಕ ಕಾರಣಕ್ಕೆ ತಂದೆಯಿಂದಲೇ ಮಗನಿಗೆ ಕೊಡಲಿ ಏಟು: ಪುತ್ರ ಸ್ಥಳದಲ್ಲೇ ಸಾವು

ದನಕ್ಕೆ ಮೇವು ಹಾಕುವ ವಿಚಾರಕ್ಕೆ ಸಂಬಧಿಸಿದಂತೆ ತಂದೆ ಮಗನ ನಡುವೆ ಗಲಾಟೆ ನಡೆದು, ಮಗನನ್ನು ತಂದೆಯೇ ಕೊಲೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

By

Published : Jun 28, 2020, 11:38 AM IST

Published : Jun 28, 2020, 11:38 AM IST

ETV Bharat / state

ಕ್ಷುಲ್ಲಕ ಕಾರಣಕ್ಕೆ ತಂದೆಯಿಂದಲೇ ಮಗನಿಗೆ ಕೊಡಲಿ ಏಟು: ಪುತ್ರ ಸ್ಥಳದಲ್ಲೇ ಸಾವು

ಪಾಪಿ ತಂದೆಯಿಂದಲೇ ಮಗನ ಎದೆಗೆ ಕೊಡಲಿ ಏಟು
ಪಾಪಿ ತಂದೆಯಿಂದಲೇ ಮಗನ ಎದೆಗೆ ಕೊಡಲಿ ಏಟು

ಬೆಳಗಾವಿ: ದನಕ್ಕೆ ಮೇವು ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಮಗನ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ತಂದೆಯೇ ಮಗನ ಎದೆಗೆ ಕೊಡಲಿ ಏಟು ನೀಡಿದ್ದ ಪರಿಣಾಮ ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗೋಕಾಕ್​ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಾಲೂಕಿನ ಮೇಲ್ಮನಹಟ್ಟಿ ಗ್ರಾಮದ ಯಮನಪ್ಪ ಗುತ್ತಿಗೆ (41) ಕೊಲೆಯಾದ ವ್ಯಕ್ತಿ. ದನಕ್ಕೆ ಮೇವು ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಬಾಳಪ್ಪ ಗುತ್ತಿಗೆ ಹಾಗೂ ಮಗ ಯಮನಪ್ಪನ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಬಾಳಪ್ಪನು ಮಗನ ಎದೆಗೆ ಕೊಡಲಿಯಿಂದ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಕೊಲೆ ಮಾಡಿದ ಬಳಿಕ ಬಾಳಪ್ಪ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಈ ಕುರಿತು ಗೋಕಾಕ್​ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details