ಕರ್ನಾಟಕ

karnataka

ETV Bharat / state

ಗ್ರಾ ಪಂ ಅಧ್ಯಕ್ಷನ ಮನೆಗೆ ನುಗ್ಗಿದ ಕಳ್ಳರು.. ಕುಟುಂಬವನ್ನು ಕೂಡಿಹಾಕಿ 23ಲಕ್ಷ ವಿಮೆ ಹಣ, 120ಗ್ರಾಂ ಚಿನ್ನ ದರೋಡೆ - ಈಟಿವಿ ಭಾರತ್ ಕನ್ನಡ ಸುದ್ದಿ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬನ್ನೂರ ತಾಂಡಾದಲ್ಲಿನ ಗ್ರಾಮ ಪಂಚಾಯಿತಿ ಅಧ್ಯಕ್ಷನ ಮನೆಯಲ್ಲಿ ದರೋಡೆ ಮಾಡಲಾಗಿದೆ. ಸೋಮವಾರ ಮಧ್ಯರಾತ್ರಿ ಮನೆ ಬಾಗಿಲು ಒಡೆದು ಒಳನುಗ್ಗಿದ ಎಂಟು ಜನ ದುಷ್ಕರ್ಮಿಗಳು 23 ಲಕ್ಷ ಹಣ, 120 ಗ್ರಾಂ ಚಿನ್ನ ದರೋಡೆ ಮಾಡಿದ್ದಾರೆ.

ದರೋಡೆಯ ಬಗ್ಗೆ ಪೊಲೀಸರಿಂದ ಪರಿಶೀಲನೆ
ದರೋಡೆಯ ಬಗ್ಗೆ ಪೊಲೀಸರಿಂದ ಪರಿಶೀಲನೆ

By

Published : Oct 25, 2022, 5:56 PM IST

ಬೆಳಗಾವಿ: ಮನೆ ಬಾಗಿಲು‌ ಒಡೆದು ಒಳ ನುಗ್ಗಿದ ಏಂಟು ಜನ ದುಷ್ಕರ್ಮಿಗಳ ಗುಂಪೊಂದು ಮನೆಯಲ್ಲಿದ್ದವರ ಮೇಲೆ ಹಲ್ಲೆ ಮಾಡಿದ್ದಾರೆ. ಅಲ್ಲದೆ, ಕುಟುಂಬದವರನ್ನು ಕೂಡಿ ಹಾಕಿ 23 ಲಕ್ಷ ಹಣ, 120 ಗ್ರಾಂ ಚಿನ್ನಾಭರಣ ದೋಚಿಕೊಂಡು ಪರಾರಿ ಆಗಿರುವ ಘಟನೆ ರಾಮದುರ್ಗ ತಾಲೂಕಿನ ಬನ್ನೂರು ಗ್ರಾಮದಲ್ಲಿ ನಡೆದಿದೆ.

ರಾಮದುರ್ಗ ತಾಲೂಕಿನ ಬನ್ನೂರ ತಾಂಡಾದಲ್ಲಿನ ಗ್ರಾಮ ಪಂಚಾಯಿತಿ ಅಧ್ಯಕ್ಷರ ಮನೆಯಲ್ಲಿ ದರೋಡೆ ಮಾಡಲಾಗಿದೆ. ನಿನ್ನೆ ಮಧ್ಯರಾತ್ರಿ ಮನೆ ಬಾಗಿಲು ಒಡೆದು ಒಳನುಗ್ಗಿದ ಎಂಟು ಜನ ದುಷ್ಕರ್ಮಿಗಳಿಂದ 23 ಲಕ್ಷ ಹಣ, 120 ಗ್ರಾಂ ಚಿನ್ನಾಭರಣ ದರೋಡೆ ಮಾಡಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ್ ರಜಪೂತ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ.

ಈ ವೇಳೆ ಮನೆಗೆ ನುಗ್ಗಿದ ಖದೀಮರು ಚಂದ್ರಶೇಖರ್ ದಂಪತಿ ಮತ್ತು ಸೊಸೆಯನ್ನು ಬೆಡ್ ರೂಂನಲ್ಲಿ ಕೂಡಿಹಾಕಿ ನಂತರ ದರೋಡೆ ಮಾಡಿದ್ದಾರೆ. ಪಿಡಿಓ ಆಗಿದ್ದ ಮಗ ಅಕಾಲಿಕ ಮರಣ ಹೊಂದಿದ್ದರು. ಮಗನ ಸಾವು ಹಿನ್ನೆಲೆ ವಿಮೆ ಹಣ ಬಂದಿದ್ದನ್ನು ಚಂದ್ರಶೇಖರ್​ ಮನೆಯಲ್ಲಿಟ್ಟಿದ್ದರು.

ಸ್ಥಳಕ್ಕೆ ಎಎಸ್‌ಪಿ ಮಹಾನಿಂಗ ನಂದಗಾವಿ, ಶಾಸಕ ಮಹಾದೇವಪ್ಪ ಯಾದವಾಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ:ಬೆಂಗಳೂರು: ಪಟಾಕಿ ವ್ಯಾಪಾರಿಯನ್ನು ಅಡ್ಡಗಟ್ಟಿ 20 ಲಕ್ಷ ದರೋಡೆ

ABOUT THE AUTHOR

...view details