ಬೆಳಗಾವಿ :ವಾಸ್ಕೊ ಮತ್ತು ಹೌರಾ ನಡುವೆ ಸಂಚರಿಸುವ ಅಮರಾವತಿ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿದ ಘಟನೆ ಗೋವಾದ ದೂಧ್ಸಾಗರ- ಕಾರಂಜೋಲ್ ಮಾರ್ಗ ಮಧ್ಯೆ ಮಂಗಳವಾರ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ 6.30ಕ್ಕೆ ವಾಸ್ಕೊದಿಂದ ಹೊರಟ್ಟಿದ್ದ ರೈಲು 8.50ರ ಸುಮಾರಿಗೆ ದೂಧ್ಸಾಗರ ದಾಟಿದೆ. ಅಲ್ಲಿಂದ ಕಾರಂಜೋಲ್ ಕಡೆಗೆ ಹೊರಟ ರೈಲಿನ ಮುಂಭಾಗದ ಚಕ್ರಗಳು ಹಳಿ ತಪ್ಪಿವೆ.
ವಿಷಯ ತಿಳಿದ ತಕ್ಷಣ ಕ್ಯಾಸಲ್ರಾಕ್ನಿಂದ ಅಪಘಾತ ಪರಿಹಾರ ರೈಲು (ಎಆರ್ಟಿ) ಹಾಗೂ ವೈದ್ಯಕೀಯ ಸಲಕರಣೆ ಹೊತ್ತ ವ್ಯಾನ್ ಘಟನಾ ಸ್ಥಳಕ್ಕೆ ದೌಡಾಯಿಸಿದೆ. ರೈಲಿನಲ್ಲಿದ್ದ ಪ್ರಯಾಣಿಕರಿಗೆ ಬೆಳಗ್ಗೆ ಉಪಾಹಾರ ಹಾಗೂ ಊಟ ಪೂರೈಕೆ ಮಾಡಲಾಗಿದೆ.