ಕರ್ನಾಟಕ

karnataka

ETV Bharat / state

ಸಿಎಂ ಯಡಿಯೂರಪ್ಪನವರಿಗೆ ಅಮಿತ್ ಶಾ ಖಾರವಾಗಿ ಮಾತನಾಡಿಲ್ಲ: ಡಿಸಿಎಂ ಕಾರಜೋಳ - DCM Govind Karajola

ಏನೇ ಸಮಸ್ಯೆಗಳಿದ್ದರೂ ಸಂಬಂಧಿಸಿದ ಮಂತ್ರಿಗಳ ಗಮನಕ್ಕೆ ತಂದು ಬಗೆ ಹರಿಸಿಕೊಳ್ಳುವಂತೆ ಅಮಿತ್​​ ಶಾ ಸೂಚನೆ ನೀಡಿದ್ದಾರೆ. ಆದ್ರೆ ಬಿ.ಎಸ್. ಯಡಿಯೂರಪ್ಪನವರಿಗೆ ಅಮಿತ್ ಶಾ ಅವರು ಖಾರವಾಗಿ ಮಾತನಾಡಿಲ್ಲ. ಅದು ಸತ್ಯಕ್ಕೆ ದೂರವಾದ ಮಾತು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

DCM Govind Karajola
ಡಿಸಿಎಂ ಗೋವಿಂದ್ ಕಾರಜೋಳ

By

Published : Jan 17, 2021, 9:58 PM IST

ಬೆಳಗಾವಿ: ಪಕ್ಷದ‌ ಕಾರ್ಯಕರ್ತರು ತಮ್ಮ ಸಮಸ್ಯೆಗಳನ್ನು ಪಕ್ಷದ ಚೌಕಟ್ಟಿನಲ್ಲಿಯೇ ಬಗೆ ಹರಿಸಿಕೊಳ್ಳುವಂತೆ ಅಮಿತ್ ಶಾ ಸೂಚನೆ ಕೊಟ್ಟಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ಡಿಸಿಎಂ ಗೋವಿಂದ್ ಕಾರಜೋಳ

ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರ ಅಸಮಾಧಾನದ ಬಗ್ಗೆ ಸಿಎಂ ಮಾತನಾಡಲಿದ್ದಾರೆ. ದೇಶದ ಗೃಹ ಮಂತ್ರಿಗಳಾದ ಅಮಿತ್ ಶಾ ಅವರು‌ ಬಹಳ‌ ಸ್ಪಷ್ಟವಾಗಿಯೇ ಹೇಳಿದ್ದಾರೆ. ತಾಲೂಕು ಮಟ್ಟದ ಸಮಸ್ಯೆಗಳನ್ನ ತಾಲೂಕು ಮಟ್ಟದಲ್ಲಿ, ಜಿಲ್ಲಾಮಟ್ಟದ ಸಮಸ್ಯೆಗಳು ಇದ್ರೆ ಜಿಲ್ಲಾ‌ ಮಟ್ಟದಲ್ಲಿ ಹಾಗೂ ರಾಜ್ಯಮಟ್ಟದ‌ ಸಮಸ್ಯೆಗಳೇನಾದರೂ ಇದ್ರೆ ರಾಜ್ಯಾಧ್ಯಕ್ಷರು ಹಾಗೂ‌ ಮುಖ್ಯಮಂತ್ರಿಗಳೊಂದಿಗೆ ಕುಳಿತು‌ ಚರ್ಚಿಸಿ ಬಗ್ಗೆ ಹರಿಸಿಕೊಳ್ಳಬೇಕೆಂದು ಅಮಿತ್ ಶಾ ಖಡಕ್ ಸಂದೇಶ ಕೊಟ್ಟಿದ್ದಾರೆ. ಇದರ ಜೊತೆಗೆ ಏನೇ ಸಮಸ್ಯೆಗಳಿದ್ದರೂ ಸಂಬಂಧಿಸಿದ ಮಂತ್ರಿಗಳ ಗಮನಕ್ಕೆ ತಂದು ಬಗೆ ಹರಿಸಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಆದ್ರೆ ಬಿ.ಎಸ್. ಯಡಿಯೂರಪ್ಪನವರಿಗೆ ಅಮಿತ್ ಶಾ ಅವರು ಖಾರವಾಗಿ ಮಾತನಾಡಿಲ್ಲ. ಅದು ಸತ್ಯಕ್ಕೆ ದೂರವಾದ ಮಾತು ಎಂದರು.

ಓದಿ:ಬೆಳಗಾವಿಯಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ ಮರಳಿದ ಅಮಿತ್ ಶಾ

ಇನ್ನು, ಎರಡು ದಿನಗಳ ಕಾಲ ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭದ್ರಾವತಿ ಹಾಗೂ ಬೆಳಗಾವಿಯಲ್ಲಿ ಅತ್ಯುತ್ತಮ ಕಾರ್ಯಕ್ರಮ ಕೊಟ್ಟಿದ್ದಾರೆ. ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ವೇಗ ನೀಡಿದ್ದು, ರಿಜರ್ವ್ ಫೋರ್ಸ್​ಗೆ 90 ಎಕರೆ ಜಮೀನನ್ನು ಕೊಟ್ಟಿದ್ದಾರೆ. ದೇಶದ ಗೃಹ ಮಂತ್ರಿಗಳು ಬಂದಿದ್ದರಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸಿಕ್ಕಿದೆ ಎಂದರು.

ABOUT THE AUTHOR

...view details