ಕರ್ನಾಟಕ

karnataka

ETV Bharat / state

ಬಸವ ಜಯಂತಿ ಆಚರಣೆ: ನಾಡಿನ ಸಮಸ್ತ ಜನತೆಗೆ ಶುಭಾಶಯ ಕೋರಿದ ಸಚಿವ ಸುರೇಶ್ ಅಂಗಡಿ - belgavi latest news

ನಾಡಿನ ಸಮಸ್ತ ಜನರಿಗೆ ಕೆಂದ್ರ ಸಚಿವ ಸುರೇಶ್​ ಕುಮಾರ್​ ಅವರು ಬಸವ ಜಯಂತಿಯ ಶುಭಾಶಯಗಳನ್ನು ಕೋರಿದ್ದಾರೆ. ಆರೋಗ್ಯದ ದೃಷ್ಟಿಯಿಂದ ಎಲ್ಲರೂ ಮನೆಯಲ್ಲಿ ಇರುವ ಮೂಲಕ ಕೋವಿಡ್-19 ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

basavanna-jayanti-
ಕರದಂಟು ನಾಡಲ್ಲಿ ಬಸವ ಜಯಂತಿ ಆಚರಣೆ

By

Published : Apr 26, 2020, 12:44 PM IST

ಬೆಳಗಾವಿ:ಬಸವೇಶ್ವರ ಜಯಂತಿ ಅಂಗವಾಗಿ ಬೆಳಗಾವಿ ಜಿಲ್ಲಾಡಳಿತ ವತಿಯಿಂದ ನಗರದ ಗೋವಾವೇಸ್​ನಲ್ಲಿರುವ ಬಸವೇಶ್ವರ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಸರಳ ಕಾರ್ಯಕ್ರಮದಲ್ಲಿ ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ ಅಂಗಡಿ ಬಸವಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ನಂತರ ಮಾತನಾಡಿದ ಅವರು, ನಾಡಿನ ಸಮಸ್ತ ಜನರಿಗೆ ಬಸವ ಜಯಂತಿಯ ಶುಭಾಶಯಗಳನ್ನು ಕೋರಿದರು. ಆರೋಗ್ಯದ ದೃಷ್ಟಿಯಿಂದ ಎಲ್ಲರೂ ಮನೆಯಲ್ಲಿರುವ ಮೂಲಕ ಕೋವಿಡ್-19 ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಶಾಸಕ ಅನಿಲ್ ಬೆನಕೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗೂಳಪ್ಪ ಹೊಸಮನಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ABOUT THE AUTHOR

...view details