ಕರ್ನಾಟಕ

karnataka

ETV Bharat / state

ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ: ಮೂವರು ಆರೋಪಿಗಳು ಸಿಐಡಿ ವಶಕ್ಕೆ - ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ

ಬೆಳಗಾವಿಯಲ್ಲಿ ಇತ್ತೀಚಿಗೆ ನಡೆದ ಮಹಿಳೆ ಮೇಲಿನ ಅಮಾನವೀಯ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸಿಐಡಿ ತಂಡ ತನ್ನ ಕಸ್ಟಡಿಗೆ ತೆಗೆದುಕೊಂಡು ತನಿಖೆ ಮುಂದುವರೆಸಿದೆ.

belagavi-women-assault-case-three-accused-in-cid-custody
ಬೆಳಗಾವಿ ಮಹಿಳೆ ಹಲ್ಲೆ ಪ್ರಕರಣ : ಮೂವರು ಆರೋಪಿಗಳು ಸಿಐಡಿ ಕಸ್ಟಡಿಗೆ

By ETV Bharat Karnataka Team

Published : Dec 21, 2023, 3:18 PM IST

ಬೆಳಗಾವಿ:ಇಲ್ಲಿನ ವಂಟಮೂರಿ ಎಂಬಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೂವರು ಪ್ರಮುಖ ಆರೋಪಿಗಳನ್ನು ಸಿಐಡಿ ತಂಡವು ಕಸ್ಟಡಿಗೆ ತೆಗೆದುಕೊಂಡು ತನಿಖೆ ಆರಂಭಿಸಿದೆ. ಬೆಳಗಾವಿಯ ನಾಲ್ಕನೇ ಜೆಎಂಎಫ್‌ಸಿ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ.

ಮೊದಲನೇ ಆರೋಪಿ ಬಸಪ್ಪ ರುದ್ರಪ್ಪ ನಾಯಕ, ಎರಡು ಮತ್ತು ಮೂರನೇ ಆರೋಪಿಗಳಾದ ರಾಜು ರುದ್ರಪ್ಪ ನಾಯಕ, ಶಿವಪ್ಪ ರಾಯಪ್ಪ ವಣ್ಣೂರ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಅಜ್ಞಾತ ಸ್ಥಳದಲ್ಲಿ ಆರೋಪಿಗಳನ್ನು ಅಧಿಕಾರಿಗಳ ತಂಡ ವಿಚಾರಣೆ ನಡೆಸುತ್ತಿದೆ.

ಕಳೆದ ಕೆಲವು ದಿನಗಳ ಹಿಂದೆ ಜೋಡಿಯೊಂದು ಪರಾರಿಯಾದ ಕಾರಣಕ್ಕೆ ಯುವಕನ ತಾಯಿಯ ಮೇಲೆ ಆರೋಪಿಗಳು ಅಮಾನವೀಯವಾಗಿ ಹಲ್ಲೆ ನಡೆಸಿದ್ದರು. ಈ ಘಟನೆ ದೇಶಾದ್ಯಂತ ಸುದ್ದಿಯಾಗಿತ್ತು. ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿದೆ.

ಇದನ್ನೂ ಓದಿ:ಬೆಳಗಾವಿ: ಮಗ ಪ್ರೀತಿಸಿ ಮದುವೆ ಆಗಿದ್ದಕ್ಕೆ ತಂದೆಯ ಮೇಲೆ ಹಲ್ಲೆ

ABOUT THE AUTHOR

...view details