ಬೆಳಗಾವಿ :ಕೊರೊನಾ ಸೋಂಕು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಜಿಲ್ಲೆಯ ಜನತೆ ಮಾತ್ರ ಯಾವುದಕ್ಕೂ ಕ್ಯಾರೇ ಎನ್ನದೇ ಗುಂಪು ಪುಂಪಾಗಿ ವ್ಯಾಪಾರ-ವಹಿವಾಟು ನಡೆಸುತ್ತಿದ್ದಾರೆ.
ಯಾರ್ ಎಷ್ಟೇ ಹೇಳಿದ್ರೂ ಬೆಳಗಾವಿ ಜನರಿಗೆ ಲಾಕ್ಡೌನ್ ಕ್ಯಾರೇ ಇಲ್ಲ..
ಮಾಲಿನಿ ಸಿಟಿ ಮೈದಾನದಲ್ಲಿರುವ ವೊಲ್ಸೇಲ್ ತರಕಾರಿ ಮಾರುಕಟ್ಟೆಯಲ್ಲಿ ಜನಸಂದಣಿ ಹೆಚ್ಚುತ್ತಿದೆ. ಬೆಳಗಾವಿ ಜನತೆ ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸದೇ, ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ.
ನಗರದ ಹೊರವಲಯದ ಮಾಲಿನಿ ಸಿಟಿ ಮೈದಾನದಲ್ಲಿರುವ ವೋಲ್ಸೇಲ್ ತರಕಾರಿ ಮಾರುಕಟ್ಟೆಯಲ್ಲಿ ಗುಂಪು ಗುಂಪಾಗಿ ಜನ ಸೇರಿದ್ದರು. ಭಯದಿಂದ ಬೆಚ್ಚಿದ ಪೊಲೀಸರು ಮಾರುಕಟ್ಟೆಯೊಳಗೆ ಪ್ರವೇಶಿಸಲು ಹಿಂದೇಟು ಹಾಕುತ್ತಿದ್ದಾರೆ. ಜನಸಂದಣಿ ತಡೆಯಲು 3 ತರಕಾರಿ ಮಾರುಕಟ್ಟೆ ಸ್ಥಾಪಿಸಿದರೂ ಸಹ ಪ್ರಯೋಜನವಿಲ್ಲದಂತಾಗಿದೆ. ಸಾಮಾಜಿಕ ಅಂತರವೂ ಇಲ್ಲದೇ, ಮಾಸ್ಕ್ ಕೂಡಾ ಧರಿಸಿದೆ ಯಾವುದೇ ಮುಂಜಾಗ್ರತಾ ಕ್ರಮವೂ ಕೈಗೊಳ್ಳದೆ ವ್ಯಾಪಾರ-ವಹಿವಾಟು ನಡೆಸುತ್ತಿದ್ದಾರೆ.
ಕೊರೊನಾ ತಡೆಗೆ ಲಾಕ್ಡೌನ್ ಜಾರಿಯಲ್ಲಿದ್ರೂ ಇಲ್ಲಿನ ಜನ ಮಾತ್ರ ಸರಿಯಾಗಿ ಸ್ಪಂದಿಸ್ತಿಲ್ಲ. ಸರ್ಕಾರ ಇದನ್ನು ತಡೆಯಲು ಇನ್ನಷ್ಟು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕಿದೆ.