ಕರ್ನಾಟಕ

karnataka

By

Published : May 9, 2021, 3:59 PM IST

ETV Bharat / state

ಲಾಕ್​ಡೌನ್​​ ನಿಯಮ ಉಲ್ಲಂಘಿಸಿದರೆ ಕ್ರಮ: ಬೆಳಗಾವಿ ಪೊಲೀಸ್​ ಆಯುಕ್ತರ ಎಚ್ಚರಿಕೆ

ಕೋವಿಡ್​ ತಡೆಗೆ ನಾಳೆಯಿಂದ ಮೇ 24 ರವರೆಗೆ ಲಾಕ್​ಡೌನ್​​ ಜಾರಿಯಲ್ಲಿರಲಿದ್ದು, ಸಾರ್ವಜನಿಕರು ನಿಯಮ ಪಾಲಿಸಿ ಸಹಕರಿಸಬೇಕು. ಅನಗತ್ಯವಾಗಿ ಓಡಾಡುವ ಜನರಿಗೆ ಶಿಕ್ಷೆ ಜತೆಗೆ ದಂಡ ಹಾಕಲಾಗುತ್ತದೆ ಎಂದು ಮಹಾನಗರ ಪೊಲೀಸ್ ಆಯುಕ್ತ ಡಾ. ಕೆ. ತ್ಯಾಗರಾಜನ್ ಜನರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

belgavi police commissioner tyagarajan
ಪೊಲೀಸ್ ಆಯುಕ್ತ ಡಾ. ಕೆ. ತ್ಯಾಗರಾಜನ್

ಬೆಳಗಾವಿ:ಎರಡನೇ ಅಲೆ ಕೋವಿಡ್​ ನಿಯಂತ್ರಣಕ್ಕೆ ಸರ್ಕಾರ ಮೇ 10 ರಿಂದ 24 ರವರೆಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಸಾರ್ವಜನಿಕರು ಪಾಲಿಸಬೇಕು‌. ಅನಗತ್ಯವಾಗಿ ಓಡಾಡುವ ಜನರಿಗೆ ಶಿಕ್ಷೆ ವಿಧಿಸುವ ಜತೆಗೆ ದಂಡ ಹಾಕಲಾಗುತ್ತದೆ ಎಂದು ಮಹಾನಗರ ಪೊಲೀಸ್ ಆಯುಕ್ತ ಡಾ. ಕೆ. ತ್ಯಾಗರಾಜನ್ ಜನರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಜನರಲ್ಲಿ ಪೊಲೀಸ್ ಆಯುಕ್ತ ಡಾ. ಕೆ. ತ್ಯಾಗರಾಜನ್ ಮನವಿ...

ಈ ಬಗ್ಗೆ ವೀಡಿಯೋ ಬಿಡುಗಡೆ ಮಾಡಿರುವ ಪೊಲೀಸ್ ಆಯುಕ್ತರು, ಕೋವಿಡ್ ಸೋಂಕು ತಡೆಗೆ ರಾಜ್ಯ ಸರ್ಕಾರ ಕೈಗೊಂಡಿರುವ ಸಂಪೂರ್ಣ ಲಾಕ್‍ಡೌನ್​ಗೆ ಜನರು ಸಹಕರಿಸಬೇಕು. ಸಾರ್ವಜನಿಕರಿಗೆ ಅಗತ್ಯ ವಸ್ತುಗಳಿಗೆ ನಿತ್ಯ ಬೆಳಗ್ಗೆ 6 ರಿಂದ 10ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಈ ವೇಳೆ ಯಾರೂ ಕೂಡ ವಾಹನ ಉಪಯೋಗಿಸಿ ಮಾರುಕಟ್ಟೆಗೆ ಬರುವಂತಿಲ್ಲ. ಇನ್ನೂ ತಳ್ಳು ಗಾಡಿಯಲ್ಲಿ ತರಕಾರಿ, ಹಣ್ಣು ಮಾರಲು ಅವಕಾಶ ನೀಡಲಾಗಿದೆ. ಅಲ್ಲಿಂದಲೇ ಖರೀದಿಸಬಹುದು.

ಇದನ್ನೂ ಓದಿ:ಕೋವಿಡ್​​ ಭೀತಿ ಮರೆತು ಗುಂಪು ಗುಂಪಾಗಿ ಫಿಶ್​ ಖರೀದಿಸಿದ ಜನ

ವಾಸ ಸ್ಥಳದ ಸಮೀಪದಲ್ಲಿಯೇ ಖರೀದಿಸಬೇಕು. ಬೆಳಗ್ಗೆ 10 ಗಂಟೆ ನಂತರ ಹೊರಗಡೆ ಬರಲು ಅವಕಾಶವಿಲ್ಲ. ಆದರೆ, ಆ್ಯಂಬುಲೆನ್ಸ್, ತುರ್ತು ವಾಹನಗಳಿಗೆ ನಿಯಮಗಳನ್ನು ಅನುಸರಿಸಿ ಸಂಚಾರಕ್ಕೆ ಅವಕಾಶ ನೀಡಲಾಗುವುದು. ಒಂದು ವೇಳೆ ಏರ್ ಪೋರ್ಟ್, ರೈಲ್ವೆ ನಿಲ್ದಾಣಕ್ಕೆ ಹೋಗುವವರು ಮುಂಚಿತವಾಗಿ ಟಿಕೆಟ್ ಬುಕ್ ಮಾಡಿದ್ದರೆ ಅಂತವರಿಗೂ ನಿಯಮಗಳಡಿ ಅವಕಾಶ ಕಲ್ಪಿಸಲಾಗುವುದು ಎಂದಿದ್ದಾರೆ.

ABOUT THE AUTHOR

...view details