ಬೆಳಗಾವಿ: ಪ್ರವಾಹದ ಸೆಳೆತಕ್ಕೆ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದೆ. ಜಿಲ್ಲಾಡಳಿತ, ತಾಲೂಕಾಡಳಿತಗಳು ಎಷ್ಟೇ ಮುನ್ನೆಚ್ಚರಿಕಾ ಕ್ರಮ ಕೈಗೊಂಡರೂ ಜನರ ನಿರ್ಲಕ್ಷ್ಯದಿಂದ ಪ್ರಾಣ ಹಾನಿಗಳಾಗುತ್ತಿವೆ.
ನಗರದ ಬಳ್ಳಾರಿ ನಾಲಾಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ರಭಸವಾಗಿ ಹರಿಯುತ್ತಿದ್ದ ಬಳ್ಳಾರಿ ನಾಲಾ ನೀರಿನಲ್ಲಿ ರಸ್ತೆ ದಾಟುವಾಗ ಸಾಂಬ್ರಾ ವಿಮಾನ ನಿಲ್ದಾಣದ ಬಳಿ ನೀರಿನ ರಭಸಕ್ಕೆ ಬೈಕ್ ಸವಾರ ಕೊಚ್ಚಿಹೋಗಿದ್ದಾನೆ. ಇಬ್ಬರು ಸವಾರರ ಪೈಕಿ ಓರ್ವ ಕೊಚ್ಚಿಕೊಂಡು ಹೋದರೆ ಮತ್ತೋರ್ವ ಪಾರಾಗಿದ್ದಾನೆ.