ಕರ್ನಾಟಕ

karnataka

ETV Bharat / state

ಚುನಾವಣಾ ಪ್ರಚಾರಕ್ಕೆ ಬಿಜೆಪಿಯಿಂದ ಮಕ್ಕಳ ಬಳಕೆ ಆರೋಪ: ಸಾರ್ವಜನಿಕರ ಆಕ್ರೋಶ

ತಾರಾ ರೋಡ್ ಶೋ ವೇಳೆ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಪರವಾದ ಭಿತ್ತಿ ಪತ್ರಗಳನ್ನು ‌ಮಕ್ಕಳಿಂದ ಗ್ರಾಮಸ್ಥರಿಗೆ ಹಂಚಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಇದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

By

Published : Apr 12, 2019, 8:04 PM IST

ಚುನಾವಣಾ ಪ್ರಚಾರ

ಬೆಳಗಾವಿ: ಬೇಸಿಗೆ ರಜೆ ಮೂಡ್​ನಲ್ಲಿರುವ ಮಕ್ಕಳನ್ನು ಬಿಜೆಪಿ ನಾಯಕರು ಚುನಾವಣೆ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಚಿತ್ರನಟಿ ತಾರಾ ಅವರು ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ರೋಡ್ ಶೋ ನಡೆಸಿದ ವೇಳೆ ಮಕ್ಕಳನ್ನು ಪ್ರಚಾರಕ್ಕೆ ಬಳಸಿಕೊಳ್ಳಲಾಗಿದೆ ಎನ್ನಲಾಗಿದೆ.

ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ

ತಾರಾ ರೋಡ್ ಶೋ ವೇಳೆ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಪರವಾದ ಭಿತ್ತಿ ಪತ್ರಗಳನ್ನು ‌ಮಕ್ಕಳಿಂದ ಗ್ರಾಮಸ್ಥರಿಗೆ ಹಂಚಿಸಲಾಯಿತು ಎಂದು ದೂರಲಾಗಿದೆ. ಹೀಗೆ ಮಕ್ಕಳನ್ನು‌ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದರೂ ಸ್ಥಳದಲ್ಲಿದ್ದ ಚುನಾವಣಾಧಿಕಾರಿಗಳು ‌ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ.

ABOUT THE AUTHOR

...view details