ಚಿಕ್ಕೋಡಿ: ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಮೂಲದ ಬಿಎಸ್ಎಫ್ ಯೋಧರೊಬ್ಬರು ಪಶ್ಚಿಮ ಬಂಗಾಳದ ಪಂಜಿ ಪಾಡದಲ್ಲಿ ಸಾವಿಗೀಡಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರುವಾಡಿ ಗ್ರಾಮದ ನಿವಾಸಿ ಸೂರಜ್ (32) ಮೃತ ಭಾರತೀಯ ಸೇನೆಯ ಯೋಧ.
ಯೋಧ ಪಶ್ಚಿಮ ಬಂಗಾಳದಲ್ಲಿ ಗಡಿಭದ್ರತಾ ಪಡೆಯಲ್ಲಿ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸೋಮವಾರ ಬೆಳಗ್ಗೆ ಪತ್ನಿಯೊಂದಿಗೆ ಸೇವಾ ಸ್ಥಳಕ್ಕೆ ಹೋಗುತ್ತಿದ್ದಾಗ ರಿಕ್ಷಾದಿಂದ ಕೆಳಗಿಳಿಯುತ್ತಿದ್ದ ವೇಳೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಯೋಧ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.