ಬೆಳಗಾವಿ: ಪ್ರಯಾಣಿಕರಿಂದ ಭರ್ತಿ ಆಗಿದ್ದ ಬಸ್ನ್ನು ಧುಮ್ಮುಕ್ಕಿ ಹರಿಯುತ್ತಿರುವ ಸೇತುವೆ ಮೇಲೆ ಚಾಲಕ ದಾಟಿಸಿರುವ ಘಟನೆ ಮಹಾರಾಷ್ಟ್ರದ ರಾಯಘಡ ಜಿಲ್ಲೆಯ ಮಹಾಡ್ ತಾಲೂಕಿನಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ.
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಅಲ್ಲಿನ ಬಹುತೇಕ ಸೇತುವೆಗಳು ಮುಳುಗಡೆಗೊಂಡಿವೆ. ಧುಮ್ಮುಕ್ಕಿ ಹರಿಯುತ್ತಿರುವ ಸೇತುವೆ ಮೇಲೆ ಪ್ರಯಾಣಿಕರು ತುಂಬಿದ್ದ ಬಸ್ ದಾಟಿಸುವ ಮೂಲಕ ಮಹಾರಾಷ್ಟ್ರ ಬಸ್ ಚಾಲಕ ಜನರ ಪ್ರಾಣದ ಜೊತೆಗೆ ಚೆಲ್ಲಾಟ ಆಡಿದ್ದಾನೆ. ಸೇತುವೆ ಮೇಲೆ ಬಸ್ ದಾಟುವ ವಿಡಿಯೋವನ್ನು ಸ್ಥಳೀಯರು ಮೊಬೈಲಿನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.