ಬೆಳಗಾವಿ :ರಾಜ್ಯಾದ್ಯಂತ ಈವರೆಗೆ 30 ಸಾವಿರ ವೈದ್ಯಕೀಯ ಸಿಬ್ಬಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಯಾರಲ್ಲೂ ಅಡ್ಡಪರಿಣಾಮ ಕಾಣಿಸಿಲ್ಲ. ಆದರೆ, ಕೋವಿಡ್ ಲಸಿಕೆ ವಿತರಣೆ ವಿಚಾರದಲ್ಲಿ ನಮ್ಮ ಗುರಿ ತಲುಪಲಾಗಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತು ರಾಜ್ಯದಲ್ಲಿ 80 ಸಾವಿರ ಲಸಿಕೆ ವಿತರಣೆ ಗುರಿ ಹೊಂದಿದ್ದೇವೆ. ಎಷ್ಟು ಗುರಿ ತಲುಪಿದ್ದೇವೆ ಎಂಬ ಬಗ್ಗೆ ಸಂಜೆ ವೇಳೆಗೆ ಜಿಲ್ಲಾವಾರು ಮಾಹಿತಿ ಬಿಡುಗಡೆ ಮಾಡುತ್ತೇವೆ ಎಂದರು.
ವ್ಯಾಕ್ಸಿನ್ ಪಡೆದು ಸಂಡೂರಿನ ವೈದ್ಯಕೀಯ ಸಿಬ್ಬಂದಿ ಹೃದಯಾಘಾತದಿಂದ ಮೃತ ಪಟ್ಟಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ವ್ಯಾಕ್ಸಿನ್ ಪಡೆದಿದ್ದಕ್ಕೆ ನಮ್ಮ ಸಿಬ್ಬಂದಿ ಮೃತನಾಗಿಲ್ಲ, ಈ ರೀತಿ ಹೇಳಲು ಹೋಗಬೇಡಿ. ಆತ ತೀವ್ರ ಹೃದಯಾಘಾತದಿಂದ ಮೃತಪಟ್ಟಿರುವುದು ಪ್ರಾಥಮಿಕ ಮಾಹಿತಿ ಇದೆ.