ಚಿಕ್ಕೋಡಿ :ನಿಪ್ಪಾಣಿ ತಾಲೂಕಿನ ಅಪ್ಪಾಚಿವಾಡಿ ತಿರುವು ಬಳಿ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ವೃದ್ಧರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಿಪ್ಪಾಣಿ ತಾಲೂಕಿನ ಹೊರವಲಯದಲ್ಲಿ ನಡೆದಿದೆ. ನಿಪ್ಪಾಣಿ ತಾಲೂಕಿನ ಬುದಿಹಾಳ ಗ್ರಾಮದ ಅಲ್ಲಾಬಕ್ಷ ಅಬ್ದುಲ್ಫಕೀರ ಮಕಾನದಾರ (60) ಮೃತ ಪಟ್ಟವರು.
ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು.. ವೃದ್ಧ ಸಾವು - undefined
ಕೋಲ್ಹಾಪುರದ ಕಡೆ ಹೊರಟಿದ್ದ ಕಾರು ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನಪ್ಪಿದ ಘಟನೆ ನಿಪ್ಪಾಣಿ ತಾಲೂಕಿನ ಹೊರವಲಯದಲ್ಲಿ ನಡೆದಿದೆ.
![ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು.. ವೃದ್ಧ ಸಾವು](https://etvbharatimages.akamaized.net/etvbharat/images/768-512-3063941-thumbnail-3x2-collide.jpg)
ಓರ್ವ ವೃದ್ಧ ಸಾವು
ನಗರದಿಂದ ಕೋಲ್ಹಾಪುರದ ಕಡೆ ಹೊರಟಿದ್ದ ಕಾರು ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಹೊಡೆದ ಪರಿಣಾಮ ಸವಾರ ಅಲ್ಲಾಬಕ್ಷ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಈ ಕುರಿತು ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.