ಚಿಕ್ಕೋಡಿ: ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿ ವಿಜಯ ಪತಾಕೆ ಹಾರಿಸುತ್ತಿದ್ದಂತೆ ಚಿಕ್ಕೋಡಿ ಪಟ್ಟಣದಲ್ಲಿ ಚಂದ್ರಕಾಂತ ಹುಕ್ಕೇರಿ ಹಾಗೂ ಅವರ ಅಭಿಮಾನಿಗಳಿಂದ ಜನರಿಗೆ ಸಿಹಿ ಹಂಚಿಕೆ ಮಾಡಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿ ಗೆಲುವು : ಚಿಕ್ಕೋಡಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮ
ನವದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಹೊರ ಬೀದಿದ್ದು, ನಿರೀಕ್ಷೆಯಂತೆ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ಗೆದ್ದಿದೆ. ಈ ಹಿನ್ನೆಲೆ ಸಂಭ್ರಮಾಚರಣೆ ನಡೆಸಲಾಗಿದೆ.
ದೆಹಲಿ ಚುನಾವಣಾ ಫಲಿತಾಂಶ ಹೊರಬಿದ್ದ ಹಿನ್ನೆಲೆ ಚಿಕ್ಕೋಡಿ ಪಟ್ಟಣದಲ್ಲಿ ಸಂಭ್ರಮಾಚರಣೆ
ಈ ಕುರಿತು ಅರವಿಂದ ಕೇಜ್ರಿವಾಲ್ ಅಭಿಮಾನಿ ಚಂದ್ರಕಾಂತ ಹುಕ್ಕೇರಿ ಮಾತನಾಡಿ, ಒಳ್ಳೆಯ ವ್ಯಕ್ತಿಗೆ ದೆಹಲಿ ಜನತೆ ಮತ್ತೆ ಸಿಎಂ ಆಗಲು ಅವಕಾಶ ನೀಡಿದೆ. ಅದರಂತೆ ಅವರ ಜನಪರ ಯೋಜನೆಗಳು ಎಲ್ಲ ಬಡ ಜನರಿಗೆ ಮುಟ್ಟಿವೆ. ದೆಹಲಿ ಸರ್ಕಾರದ ನಿಯಮಾವಳಿಗಳು ಅತಿ ಶೀಘ್ರದಲ್ಲಿ ಕರ್ನಾಟಕ ರಾಜ್ಯದಲ್ಲಿ ಬರಲಿ ಎಂದರು.