ಬೆಳಗಾವಿ: ನಾನು ಸಚಿವನಾಗಿ ಕೆಲಸ ಮಾಡಿದ್ದೇನೆ. ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಆಸೆ ಪಟ್ಟಿಲ್ಲ. ಕೊಟ್ಟರೂ ತೆಗೆದುಕೊಳ್ಳುವುದಿಲ್ಲ ಎಂದು ಮಾಜಿ ಸಚಿವ ಶ್ರೀಮಂತ ಪಾಟೀಲ್ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ನನಗೆ ಯಾವುದೇ ರೀತಿಯಲ್ಲಿ ಅನ್ಯಾಯ ಆಗೋದಿಲ್ಲ ಎಂಬ ಪೂರ್ಣ ಭರವಸೆ ನನಗಿದೆ. ಪಕ್ಷದ ಮುಖಂಡರು ಯಾವ ಜವಾಬ್ದಾರಿ ಕೊಡುತ್ತಾರೋ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ನನಗೆ ಸಚಿವ ಸ್ಥಾನ ಕೊಡದಿರುವುದಕ್ಕೆ ಬೇಜಾರಿಲ್ಲ. ಆದರೆ ಮುಂಬರುವ ದಿನಗಳಲ್ಲಿ ಮತ್ತೊಂದು ದೊಡ್ಡ ಜವಾಬ್ದಾರಿ ಕೊಡಬಹುದು. ಈಗಾಗಲೇ ಸಿಎಂ ಅವರನ್ನು ಭೇಟಿಯಾಗಿ ನನಗೂ ಅವಕಾಶ ಕೊಡಿ ಎಂದು ಮನವಿ ಮಾಡಿದ್ದೇವೆ. ಸಿಎಂ ಏನು ಕೊಡುತ್ತಾರೋ ಅದನ್ನು ನಿಭಾಯಿಸುತ್ತೇನೆ ಎಂದರು.