ಕರ್ನಾಟಕ

karnataka

ETV Bharat / state

ಪ್ರವಾಹ ಸಂತ್ರಸ್ತರ ಸಂಕಷ್ಟಗಳಿಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸಿಎಂ ಖಡಕ್​ ಸೂಚನೆ

ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿರುವ ಸಿಎಂ ಯಡಿಯೂರಪ್ಪ ಅವರು ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಪ್ರವಾಹದಲ್ಲಿ ಉಂಟಾದ ಹಾನಿಯ ಬಗ್ಗೆ ಮಾಹಿತಿ ಪಡೆದರು. ಅಲ್ಲದೆ, ಜನರ ಸಂಕಷ್ಟಕ್ಕೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಸಹ ನೀಡಿದ್ರು.

By

Published : Oct 4, 2019, 8:29 AM IST

CM Yediyurappa

ಬೆಳಗಾವಿ:ಮುಖ್ಯಮಂತ್ರಿ ‌ಬಿ.ಎಸ್. ಯಡಿಯೂರಪ್ಪ ನಿನ್ನೆ ಜಿಲ್ಲೆಗೆ ಭೇಟಿ ನೀಡಿ ಪಕ್ಷದ ಎಲ್ಲಾ ಶಾಸಕರೊಂದಿಗೆ ಸಭೆ ನಡೆಸಿದರು.

ನಂತರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದ ಸಿಎಂ ಎಲ್ಲಾ ಪಕ್ಷದ ಶಾಸಕರ ಜೊತೆಗೆ ಅಧಿಕಾರಿಗಳ ಪರಿಶೀಲನಾ ಸಭೆ ನಡೆಸಿ ಪ್ರವಾಹದಲ್ಲಿ ಉಂಟಾದ ಹಾನಿಯ ಬಗ್ಗೆ ಮಾಹಿತಿ ಪಡೆದರು. ಜನರ ಸಂಕಷ್ಟಕ್ಕೆ ನೆರವಾಗುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ರು.

ಜಿಲ್ಲೆಯ ಅಧಿಕಾರಿಗಳೊಂದಿಗೆ ಸಿಎಂ ಸಭೆ

ಪ್ರವಾಹದಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಐದು ಲಕ್ಷ ರೂಪಾಯಿ ಘೋಷಣೆ ಮಾಡಿದ್ದ ಸಿಎಂ, ಸ್ವತಃ ಆಯ್ದ ಕೆಲವು ತಾಲೂಕುಗಳ ಫಲಾನುಭವಿಗಳಿಗೆ ಒಂದು ಲಕ್ಷ ರೂ. ಚೆಕ್ ವಿತರಿಸಿದರು. ಮನೆ ಕಳೆದುಕೊಂಡು ಬೀದಿಗೆ ಬಿದ್ದಿರುವ ಜನರಿಗೆ ಮೊದಲ ಕಂತಿನಲ್ಲಿ ಒಂದು ಲಕ್ಷ ರೂ. ನೆರವು ನೀಡಿದ್ದು, ಸದ್ಯ ಮನೆ ಕಟ್ಟಿಕೊಳ್ಳಲು ಸಹಾಯವಾಗುವಂತೆ ಸಿಎಂ ಎಲ್ಲಾ ಫಲಾನುಭವಿಗಳಿಗೂ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.

ಮೃತ ಪಿ‌ಎಸ್ಐ ಪತ್ನಿಗೆ 20 ಲಕ್ಷ ಪರಿಹಾರ:
ಪ್ರವಾಹ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಎಸ್​ಐ ವೀರಪ್ಪ ಲಟ್ಟೆ ಎಂಬುವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಅವರ ಪತ್ನಿ ಕಸ್ತೂರಿ ಲಟ್ಟೆ ಅವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 20 ಲಕ್ಷ ಪರಿಹಾರದ ಚೆಕ್​ನ್ನು ಯಡಿಯೂರಪ್ಪ ವಿತರಿಸಿದರು.

ಸಿಎಂ ಪರಿಹಾರ ನಿಧಿಗೆ 1.90 ಕೋಟಿ ಚೆಕ್:
ಇದೇ ವೇಳೆ ಪ್ರವಾಹ ಬಾಧಿತ ಸಂತ್ರಸ್ತರಿಗೆ ನೆರವಾಗಲು ವಾಯವ್ಯ ಸಾರಿಗೆ ಸಂಸ್ಥೆ ಸುಮಾರು 1.90 ಕೋಟಿ ರೂಪಾಯಿಗಳ ಚೆಕ್​ನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ರು.

ಈ ಸಭೆಯಲ್ಲಿ ಪರಿಶೀಲನಾ ಸಭೆಯಲ್ಲಿ ಬೆಳಗಾವಿ ಶಾಸಕ ಅಭಯ್ ಪಾಟೀಲ್. ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಮಾಹಾದೇವಪ್ಪ ಯಾದವಾಡ ಸೇರಿದಂತೆ ಅನೇಕ ಶಾಸಕರು ಭಾಗಿಯಾಗಿದ್ದರು.

ABOUT THE AUTHOR

...view details