ಕರ್ನಾಟಕ

karnataka

ETV Bharat / state

ಪಕ್ಷದ ಚಿಹ್ನೆ ಮೇಲೆ ಮಹಾನಗರ ಪಾಲಿಕೆ ಚುನಾವಣೆ: ಹೈಕಮಾಂಡ್ ನಾಯಕರಿಂದಲೇ ನಿರ್ಧಾರ ಎಂದ ಎಂ ಬಿ ಪಾಟೀಲ್ - municipal corporation election ,

ಸೆ.3ರಂದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಈ ಸಂಬಂಧ ಉಸ್ತುವಾರಿ ಎಂ ಬಿ ಪಾಟೀಲ್​ ನೇತೃತ್ವದಲ್ಲಿ ನಗರದ ಕಾಂಗ್ರೆಸ್ ಭವನದಲ್ಲಿ ಮಹತ್ವದ ಸಭೆ ನಡೆಯಿತು.

MB Patil
ಎಂಬಿ ಪಾಟೀಲ್

By

Published : Aug 16, 2021, 5:32 PM IST

ಬೆಳಗಾವಿ:ಸೆ.3ರಂದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಉಸ್ತುವಾರಿ ಎಂಬಿ ಪಾಟೀಲ್​ರವರ ನೇತೃತ್ವದಲ್ಲಿ ನಗರದ ಕಾಂಗ್ರೆಸ್ ಭವನದಲ್ಲಿ ಮಹತ್ವದ ಸಭೆ ನಡೆಯಿತು.

ಕಾಂಗ್ರೆಸ್​ ನಾಯಕ ಎಂಬಿ ಪಾಟೀಲ್​ ಮಾಧ್ಯಮಗೋಷ್ಟಿ

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಚಿಹ್ನೆ ಮೇಲೆ ಚುನಾವಣೆ ಬಗ್ಗೆ ಸಭೆಯಲ್ಲಿ ಎಲ್ಲಾ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹ ಮಾಡಿದ್ದೇವೆ. ಈ ಅಭಿಪ್ರಾಯವನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್,‌ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಮುಂದಿಡುತ್ತೇವೆ. ವರಿಷ್ಠರ ನಿರ್ದೇಶನ ಪ್ರಕಾರ ಮುಂದಿನ ನಿರ್ಣಯ ಆಗುತ್ತದೆ. ವಿವಿಧ ಅಭಿಪ್ರಾಯ ಬಂದಿದ್ದು ಪಕ್ಷದ ನಿರ್ದೇಶನದ ಮೇಲೆ ನಿರ್ಧಾರವಾಗಲಿದೆ. ಚಿಹ್ನೆ ಮೇಲೆ ಸ್ಪರ್ಧೆಗೆ ಪರ-ವಿರೋಧ ಎರಡು ಅಭಿಪ್ರಾಯಗಳು ವ್ಯಕ್ತವಾಗಿವೆ ಎಂದರು.

ಈಗ 120 ಜನರು ಚುನಾವಣೆಗೆ ಅಪ್ಲಿಕೇಷನ್ ಹಾಕಿದ್ದಾರೆ. ನಾವು ಯಾವ‌ ನಿರ್ಧಾರ ಮಾಡಿದರೂ ಜಿಲ್ಲೆ ಹಾಗೂ ರಾಜ್ಯಕ್ಕೆ ಒಳ್ಳೆಯದಾಗಬೇಕು ಎಂದರು.

ಸಭೆಯಲ್ಲಿ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್​​, ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ, ನಾಸೀರ್ ಹುಸೇನ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತಿತರರು ಭಾಗಿಯಾಗಿದ್ದರು.

ಓದಿ: ಕಾವೇರಿ ನಿವಾಸ ಖಾಲಿ ಮಾಡದಿರಲು ಬಿಎಸ್​ವೈ ನಿರ್ಧಾರ..?

ABOUT THE AUTHOR

...view details