ಕರ್ನಾಟಕ

karnataka

ETV Bharat / state

ಅವೈಜ್ಞಾನಿಕ ರಸ್ತೆ ನಿರ್ಮಾಣಕ್ಕೆ ಆಕ್ಷೇಪ... ಗನ್​​​ ತೋರಿಸಿ ಹೆದರಿಸಿದ ಗುತ್ತಿಗೆದಾರ?

ರಸ್ತೆ ನಿರ್ಮಾಣಕ್ಕೆ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆ ಸ್ಥಳೀಯರನ್ನು ಹೆದರಿಸಲು ಗನ್ ಸಮೇತ ಗುತ್ತಿಗೆದಾರನೋರ್ವ ಕಾಮಗಾರಿ ಸ್ಥಳಕ್ಕೆ ಬಂದಿರುವ ಘಟನೆ ನಡೆದಿದೆ.

By

Published : Mar 16, 2019, 8:10 PM IST

ಅವೈಜ್ಞಾನಿಕ ರಸ್ತೆ ನಿರ್ಮಾಣಕ್ಕೆ ಆಕ್ಷೇಪ ಅವೈಜ್ಞಾನಿಕ ರಸ್ತೆ ನಿರ್ಮಾಣಕ್ಕೆ ಆಕ್ಷೇಪ

ಬೆಳಗಾವಿ : ಅವೈಜ್ಞಾನಿಕ ರಸ್ತೆ ನಿರ್ಮಾಣಕ್ಕೆ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆ ಸ್ಥಳೀಯರನ್ನು ಹೆದರಿಸಲು ಗನ್ ಸಮೇತ ಗುತ್ತಿಗೆದಾರನೋರ್ವ ಕಾಮಗಾರಿ ಸ್ಥಳಕ್ಕೆ ಬಂದಿರುವ ಘಟನೆ ಕಿತ್ತೂರು ಪಟ್ಟಣದಲ್ಲಿ ನಡೆದಿದೆ.

ಕಿತ್ತೂರು ಪಟ್ಟಣದ ಆರನೇ ವಾರ್ಡ್​ನಲ್ಲಿ ಕೈಗೊಳ್ಳಲಾದ ರಸ್ತೆ ಕಾಮಗಾರಿಗೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ಸ್ಥಳೀಯರನ್ನು ಹೆದರಿಸಲು ಬಾಬು ಮಲ್ಲಾಪುರಕರ ಎಂಬಾತ ಗನ್‌ ಸಮೇತ ಕಾಮಗಾರಿ ಸ್ಥಳಕ್ಕೆ ಆಗಮಿಸಿ ಹೆದರಿಸಿದ್ದಾನೆ ಎನ್ನಲಾಗುತ್ತಿದೆ.

ಲೋಕಸಭೆ ಚುನಾವಣೆ ‌ನೀತಿ ಸಂಹಿತೆ ಜಾರಿಯಲ್ಲಿದ್ದು, ವೈಯಕ್ತಿಕವಾಗಿ ಬಳಸುವ ಗನ್​​ಗಳನ್ನು ಸ್ಥಳೀಯ ಪೊಲೀಸ್ ಠಾಣೆಗೆ ಹಾಜರುಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ಸೂಚನೆ ನೀಡಿದ್ದಾರೆ. ಆದರೆ ಗುತ್ತಿಗೆದಾರ ಬಾಬು ಮಲ್ಲಾಪುರಕರ ಮಾತ್ರ ಸಾರ್ವಜನಿಕ ಸ್ಥಳದಲ್ಲಿ‌ ಗನ್‌ ಇಟ್ಟುಕೊಂಡು ಓಡಾಡುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.

ABOUT THE AUTHOR

...view details