ಅಥಣಿ: ಇಲ್ಲಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ನಿರ್ಮಿಸಿರುವ ಕೊರೊನಾ ಸೋಂಕು ನಿವಾರಕ ಮಾರ್ಗವನ್ನು ಡಿಸಿಎಂ ಲಕ್ಷ್ಮಣ ಸವದಿ ಉದ್ಘಾಟಿಸಿದರು.
ಅಥಣಿಯಲ್ಲಿ ಸೋಂಕು ನಿವಾರಕ ಮಾರ್ಗ ಉದ್ಘಾಟಿಸಿದ ಡಿಸಿಎಂ ಸವದಿ - ಲಾಕ್ಡೌನ್
ಬೆಳಗಾವಿಯ ಅಥಣಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಕೊರೊನಾ ಸೋಂಕು ನಿವಾರಣೆ ಮಾರ್ಗವನ್ನು ನಿರ್ಮಿಸಲಾಗಿದೆ. ಇಂದು ಡಿಸಿಎಂ ಲಕ್ಷ್ಮಣ ಸವದಿಯವರು ಇದನ್ನು ಉದ್ಘಾಟಿಸಿ ಸಾರ್ವಜನಿಕರ ಬಳಕೆಗೆ ಅನುವು ಮಾಡಿಕೊಟ್ಟಿದ್ದಾರೆ.
![ಅಥಣಿಯಲ್ಲಿ ಸೋಂಕು ನಿವಾರಕ ಮಾರ್ಗ ಉದ್ಘಾಟಿಸಿದ ಡಿಸಿಎಂ ಸವದಿ DCM Savadi](https://etvbharatimages.akamaized.net/etvbharat/prod-images/768-512-7234982-thumbnail-3x2-mng.jpg)
ಅಥಣಿಯಲ್ಲಿ ಕೊರೊನಾ ಸೋಂಕು ನಿವಾರಣೆ ಮಾರ್ಗ
ಮೂರನೇ ಹಂತದ ಲಾಕ್ಡೌನ್ ಕೊನೆಯಾದರೆ ಸರ್ಕಾರದಿಂದ ಬಸ್ ಸಂಚಾರ ಪ್ರಾರಂಭಿಸಲು ಅನುಮತಿ ಸಿಗಬಹುದು. ಈ ಹಿನ್ನೆಲೆಯಲ್ಲಿ ಘಟಕದಲ್ಲಿ ಸಿದ್ಧತೆ ನಡೆದಿದ್ದು, ಈ ಸೋಂಕು ನಿವಾರಕ ಮಾರ್ಗ ಕೊರೊನಾ ಹರಡುವಿಕೆ ತಡೆಗಟ್ಟಲು ಸಹಕಾರಿಯಾಗಲಿದೆ.
ಅಥಣಿಯಲ್ಲಿ ಕೊರೊನಾ ಸೋಂಕು ನಿವಾರಕ ಮಾರ್ಗ
ಸಾರಿಗೆ ಇಲಾಖೆ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಚಿಕ್ಕೋಡಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಚಿದಾನಂದ ಸವದಿಯವರು ಈ ಸೋಂಕು ನಿವಾರಕ ಮಾರ್ಗವನ್ನು ಸ್ಥಾಪಿಸಿದ್ದಾರೆ.