ಕರ್ನಾಟಕ

karnataka

By

Published : May 23, 2021, 7:18 PM IST

ETV Bharat / state

ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಮತ್ತೊಬ್ಬ ಶಿಕ್ಷಕಿ ಕೊರೊನಾಗೆ ಬಲಿ

ಬೆಳಗಾವಿ ಉಪಚುನಾವಣೆಯಲ್ಲಿ ಕಾರ್ಯ ನಿರ್ವಹಿಸಿದ್ದ ಜಿಲ್ಲೆಯ ಹುದಲಿ ಸರ್ಕಾರಿ ಪ್ರೌಢಶಾಲೆ ಶಿಕ್ಷಕಿ ಶ್ರೀದೇವಿ ಹುಕ್ಕೇರಿ ಎಂಬುವವರು ಕೊರೊನಾಗೆ ಬಲಿಯಾಗಿದ್ದಾರೆ.

death of another teacher from Corona
ಮತ್ತೊಬ್ಬ ಶಿಕ್ಷಕಿ ಕೊರೊನಾಗೆ ಬಲಿ

ಬೆಳಗಾವಿ: ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಶಿಕ್ಷಕಿ ಶ್ರೀದೇವಿ ಹುಕ್ಕೇರಿ (37) ಕೊರೊನಾಗೆ ಬಲಿಯಾಗಿದ್ದಾರೆ.

ಮೃತ ಶಿಕ್ಷಕಿ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕರ್ತವ್ಯ ನಿಭಾಯಿಸಿದ್ದರು. ಈ ವೇಳೆ ಕೊರೊನಾ ತಗುಲಿ ಹಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ.

ಈವರೆಗೆ ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯ ನಿಭಾಯಿಸಿರುವ 12 ಮಂದಿ ಶಿಕ್ಷಕರು ಕೋವಿಡ್​ಗೆ ಬಲಿಯಾಗಿದ್ದಾರೆ ಎಂದು ಶಿಕ್ಷಣ ಇಲಾಖೆ‌ ಮಾಹಿತಿ ನೀಡಿದೆ.

ಓದಿ:ಮಕ್ಕಳನ್ನೇ ಕಾಡುತ್ತಿದೆ ಕೊರೊನಾ: ಒಂದೇ ಜಿಲ್ಲೆಯ 341 ಮಕ್ಕಳಿಗೆ ಸೋಂಕು

ABOUT THE AUTHOR

...view details