ಬೆಳಗಾವಿ:ಸಿಎಂ ಯಡಿಯೂರಪ್ಪನವರಿಗೆ ಏನಾದರೂ ತೊಂದರೆಗಳಿದ್ದರೂ ಅದನ್ನು ಸರಿಪಡಿಸಿಕೊಂಡು ರಾಜ್ಯದ ಅಭಿವೃದ್ಧಿ ಮಾಡಬೇಕು ಎಂದು ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ಹೇಳಿದ್ದಾರೆ.
ತಂತಿ ಮೇಲೆ ನಡಿಗೆಯಾಗಿದೆ ಎಂಬ ಸಿಎಂ ಹೇಳಿಕೆಗೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿದ ಡಾ.ಪ್ರಭಾಕರ ಕೋರೆ, ಯಾವುದೇ ವ್ಯಕ್ತಿ ಮುಖ್ಯಮಂತ್ರಿ ಹುದ್ದೆಗೇರಲು ಕಷ್ಟ ಅನುಭವಿಸಬೇಕು. ಹೀಗಾಗಿ ತೊಂದರೆಗಳಿದ್ದರೂ ಅದನ್ನು ಸರಿಪಡಿಸಿಕೊಂಡು ಸಿಎಂ ರಾಜ್ಯದ ಅಭಿವೃದ್ಧಿ ಮಾಡಬೇಕು ಎಂದರು.ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುವುದಿಲ್ಲ. ಬಿಜೆಪಿ ಸರ್ಕಾರವೇ ಈ ಅವಧಿಯನ್ನು ಪೂರ್ಣಗೊಳಿಸಲಿದೆ. ಅನರ್ಹರಿಗೆ ಟಿಕೆಟ್ ನೀಡುವ ಬಗ್ಗೆ ಸಿಎಂ ಈಗಾಗಲೇ ಹೇಳಿಕೆ ನೀಡಿದ್ದಾರೆ. 15 ಜನ ರಾಜೀನಾಮೆ ನೀಡಿದ್ದಕ್ಕೆ ನಮ್ಮ ಸರ್ಕಾರ ರಚನೆ ಆಗಿದೆ. ನಮ್ಮ ಪಕ್ಷ ಸಿದ್ಧಾಂತ ಒಪ್ಪಿಕೊಂಡೆ ಅನರ್ಹರು ಬಿಜೆಪಿ ಕಡೆಗೆ ಒಲವು ತೋರಿದ್ದಾರೆ ಎಂದರು.