ಕರ್ನಾಟಕ

karnataka

By

Published : Apr 21, 2021, 8:46 AM IST

ETV Bharat / state

ದೂದಗಂಗಾ ನದಿಗೆ ಬಾಗಿನ ಅರ್ಪಿಸಿದ ಸಚಿವೆ ಶಶಿಕಲಾ ಜೊಲ್ಲೆ

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿಗೆ ಭೇಟಿ ನೀಡಿದ ಸಚಿವೆ ಶಶಿಕಲಾ ಜೊಲ್ಲೆ ದೂದಗಂಗಾ ನದಿಗೆ ಬಾಗಿನ ಅರ್ಪಿಸಿದರು.

Dudhganga river worship, Dudhganga river worship by Minister Shashikala Jolle, Minister Shashikala Jolle, Minister Shashikala Jolle news, ದೂದಗಂಗಾ ನದಿಗೆ ಬಾಗಿನ ಅರ್ಪಣೆ, ದೂದಗಂಗಾ ನದಿಗೆ ಬಾಗಿನ ಅರ್ಪಿಸಿದ ಸಚಿವೆ ಶಶಿಕಲಾ ಜೊಲ್ಲೆ, ಸಚಿವೆ ಶಶಿಕಲಾ ಜೊಲ್ಲೆ, ಸಚಿವೆ ಶಶಿಕಲಾ ಜೊಲ್ಲೆ ಸುದ್ದಿ,
ದೂದಗಂಗಾ ನದಿಗೆ ಬಾಗಿನ ಅರ್ಪಿಸಿದ ಸಚಿವೆ ಶಶಿಕಲಾ ಜೊಲ್ಲೆ

ನಿಪ್ಪಾಣಿ (ಬೆಳಗಾವಿ):ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಬ ಜೊಲ್ಲೆಬೂದಿಹಾಳ ಗ್ರಾಮದ ವೇದಗಂಗಾ ನದಿಗೆ ಅಡ್ಡವಾಗಿ ನಿರ್ಮಿಸಿದ ಬಾಂದಾರಕ್ಕೆ ಬಾಗಿನ ಅರ್ಪಿಸಿದರು.

ಬೂದಿಹಾಳ ಬಾಂದಾರದ ಹಿನ್ನೀರಿನಿಂದ ಸುಮಾರು 3 ಸಾವಿರ ಎಕರೆ ಜಮೀನಿಗೆ ನೀರು ಒದಗಿಸಲಾಗಿದೆ‌. ನಾಲ್ಕು ದಶಕಗಳ ರೈತರ ಕನಸು ನನಸಾಗಿದ್ದು ಸಂತೋಷವಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

'ಮಹಾರಾಷ್ಟ್ರದ ರೈತರಿಗೂ ನೆರವಾಗಿದೆ'

ಕೋವಿಡ್ ಹತೋಟಿಗೆ ಬಂದ ನಂತರ ಕೃಷಿ ಸಚಿವ ಜೆ.ಸಿ. ಮಾಧುಸ್ವಾಮಿ ಮತ್ತು ಕಣೇರಿಮಠದ ಕಾಡಸಿದ್ಧೇಶ್ವರ ಸ್ವಾಮೀಜಿಯವರನ್ನು ಕರೆಯಿಸಿ ಬಾಂದಾರದ ಉದ್ಘಾಟನೆ ನೆರವೇರಿಸಲಾಗುವುದು. ಕೋಡಣಿಯಲ್ಲಿ ನಿರ್ಮಿಸಿದ ಬಾಂದಾರದಲ್ಲಿ ಮೂರ್ನಾಲ್ಕು ದಿನಗಳಲ್ಲಿ ಗಂಗಾಪೂಜೆ ನೆರವೇರಿಸಲಾಗುವುದು. ಈ ಬಾಂದಾರಗಳ ಬ್ಯಾಕ್ ವಾಟರ್​ದಿಂದಾಗಿ ಕೇವಲ ನನ್ನ ತಾಲ್ಲೂಕುಗಳ ರೈತರಿಗೆ ಅಷ್ಟೇ ಅಲ್ಲದೇ, ಪಕ್ಕದ ಮಹಾರಾಷ್ಟ್ರದ ಕೆಲ ಗ್ರಾಮಗಳ ರೈತರಿಗೂ ನೆರವಾಗುತ್ತಿದೆ. ಈ ಕುರಿತು ಅಲ್ಲಿಯ ರೈತರೂ ಕೂಡ ಕರೆ ಮಾಡಿ ಧನ್ಯವಾದ ಸಲ್ಲಿಸುತ್ತಿದ್ದಾರೆ ಎಂದರು.

ABOUT THE AUTHOR

...view details