ಕರ್ನಾಟಕ

karnataka

ಹೈವೋಲ್ಟೇಜ್ ವಿದ್ಯುತ್ ತಂತಿ ತಗುಲಿ ಯುವಕ ಸಾವು

By

Published : Jul 12, 2021, 4:52 PM IST

ಹೈವೋಲ್ಟೇಜ್ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ಸಾವಳಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..

ವಿದ್ಯುತ್ ತಂತಿ ತಗುಲಿ ಯುವಕ ಸಾವು
ವಿದ್ಯುತ್ ತಂತಿ ತಗುಲಿ ಯುವಕ ಸಾವು

ಅಥಣಿ :ಬಹಿರ್ದೆಸೆಗೆ ಹೋದ ಸಮಯದಲ್ಲಿ ಹೈ-ವೋಲ್ಟೇಜ್ ವಿದ್ಯುತ್ ತಂತಿ ತುಳಿದು ಯುವಕ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ತುಬಚಿ ಗ್ರಾಮದ ಪುನರ್ವಸತಿ ಕೇಂದ್ರದ ಬಳಿ ಸಂಭವಿಸಿದೆ. ಅಥಣಿ ತಾಲೂಕಿನ ತೀರ್ಥ ಗ್ರಾಮದ ಅಂಬರೀಶ್ ಕಾಂಬಳೆ (24) ಎಂಬಾತ ಮೃತ ದುರ್ದೈವಿ.

ಹೈವೋಲ್ಟೇಜ್ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ಸಾವಳಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯುತ್ ಇಲಾಖೆ ನಿರ್ಲಕ್ಷದಿಂದಾಗಿ ಸರಿಯಾದ ನಿರ್ವಹಣೆ ಮಾಡದೇ ಇರುವುದರಿಂದ ಈ ಘಟನೆ ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ : ತಿಂಡಿ ತಿನ್ನುವಾಗ ಉಸಿರುಗಟ್ಟಿ ಸಾವಿಗೀಡಾದ ಮಗು, ಪೋಷಕರೇ ಎಚ್ಚರಿಕೆಯಿರಲಿ..

ABOUT THE AUTHOR

...view details