ಕರ್ನಾಟಕ

karnataka

By

Published : Aug 29, 2020, 1:14 AM IST

ETV Bharat / state

ಬೆಳಗಾವಿ: ಮೂವರು ಮಕ್ಕಳಿಗೆ ವಿಷವುಣಿಸಿ ಸಾವಿಗೆ ಶರಣಾದ ತಂದೆ

ತಂದೆಯೋರ್ವ ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ, ಬಳಿಕ ತಾನೂ ಸಾವಿಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

father-committed-suicide-with-his-three-children
ಮೂವರು ಮಕ್ಕಳಿಗೆ ವಿಷವುಣಿಸಿ ಸಾವಿಗೆ ಶರಣಾದ ತಂದೆ

ಬೆಳಗಾವಿ : ತಂದೆಯೋರ್ವ ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ, ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಗೋಕಾಕ್​ ತಾಲೂಕಿನ ಕಡಬಗಟ್ಟಿ ಗ್ರಾಮದಲ್ಲಿ ನಡೆದಿದೆ.

ಸಾವನ್ನಪ್ಪಿದವರನ್ನು ಹುಕ್ಕೇರಿ ತಾಲೂಕಿನ ರಾಜಕಟ್ಟಿ ಗ್ರಾಮದ ಮಾರುತಿ ಯಲ್ಲಪ್ಪ ಪೂಜಾರಿ (37), ಮಕ್ಕಳಾದ ಸಮರ್ಥ (8), ಯಲ್ಲಪ್ಪ (6) ಹಾಗೂ ಪೂಜಾ (4) ಎಂದು ಗುರುತಿಸಲಾಗಿದೆ.

ಅಂಕಲಗಿ ಪ್ರಾಥಮಿಕ ಕೇಂದ್ರಕ್ಕೆ ಹೋಗಿ ಬರುವುದಾಗಿ ಹೇಳಿ ಮಾರುತಿ ಮಕ್ಕಳ ಸಮೇತ ಹೊರ ಬಂದಿದ್ದ. ಬಳಿಕ ಕಡಬಗಟ್ಟಿ ಬೆಟ್ಟದ ಪ್ರದೇಶದಲ್ಲಿ ಮಕ್ಕಳಿಗೆ ವಿಷ ಉಣಿಸಿ, ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ.

ಘಟನೆ ಬಗ್ಗೆ ಗೋಕಾಕ್​ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ABOUT THE AUTHOR

...view details