ಚಿಕ್ಕೋಡಿ :ಬೆಳಗಾವಿ ಲೋಕಸಭಾ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಬಿಜೆಪಿಯ ಮಂಗಳಾ ಅಂಗಡಿ ಪರ ಪ್ರಚಾರ ಭರ್ಜರಿಯಾಗಿದೆ. ಈ ಕಡೆ ಕಾಂಗ್ರೆಸ್ನಿಂದ ಸತೀಶ್ ಜಾರಕಿಹೊಳಿ ಸ್ಪರ್ಧೆ ಮಾಡಿದ್ದು, ಅವರು ಕೂಡ ಪ್ರಚಾರ ಜೋರಾಗಿಯೇ ನಡೆಸಿದ್ದಾರೆ. ಆದರೆ, ಕಾಂಗ್ರೆಸ್ನ ಮಾಜಿ ಸಚಿವ ಹಾಗೂ ಹಿರಿಯ ನಾಯಕ ಪ್ರಕಾಶ್ ಹುಕ್ಕೇರಿ ಮಾತ್ರ ಎಲ್ಲೂ ಸತೀಶ್ ಪರ ಪ್ರಚಾರದಲ್ಲಿ ಭಾಗಿಯಾಗಿಲ್ಲ.
ಸುರೇಶ್ ಅಂಗಡಿ ಪತ್ನಿಗೆ ಟಿಕೇಟ್ ನೀಡಿದರೆ ನಾನೇ ಅವರ ಪರ ಮತ ಚಲಾಯಿಸುವೆ ಎಂದಿದ್ದ ಪ್ರಕಾಶ್ ಹುಕ್ಕೇರಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದ್ದರು. ಈಗ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪರ ಮತ ಬೇಟೆಗೆ ಇಳಿಯದ ಹುಕ್ಕೇರಿ, ಪರೋಕ್ಷವಾಗಿ ತಮ್ಮ ಹೇಳಿಕೆ ಸಮರ್ಥಿಸಿಕೊಳ್ಳುತ್ತಿದ್ದಾರಾ? ಎಂಬುವುದು ಸಾರ್ವಜನಿಕ ವಲಯದ ಪ್ರಶ್ನೆ.