ಕರ್ನಾಟಕ

karnataka

ETV Bharat / state

ಮೊಸರಲ್ಲಿ ಕಲ್ಲು ಹುಡುಕುವುದೇ ಸಿದ್ದರಾಮಯ್ಯನವರ ಕೆಲಸ: ಕಾರಜೋಳ ತಿರುಗೇಟು - DCM Govinda Karajola talk about cabinet expansion

ಕೇಂದ್ರ ಸಂಪುಟ ವಿಸ್ತರಣೆಯಲ್ಲಿ ಪ್ರಮುಖ ಇಲಾಖೆಗಳು ನಮ್ಮ ರಾಜ್ಯಕ್ಕೆ ಸಿಕ್ಕಿವೆ. ಶೋಭಾ ಕರಂದ್ಲಾಜೆ ಸೇರಿ ನಾಲ್ವರಿಗೂ ಮಹತ್ವದ ಖಾತೆಯನ್ನೇ ನೀಡಲಾಗಿದೆ. ಸಿದ್ದರಾಮಯ್ಯನವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆಂದು ಡಿಸಿಎಂ ಗೋವಿಂದ​ ಕಾರಜೋಳ ತಿರುಗೇಟು ನೀಡಿದ್ದಾರೆ.

govinda-karajola
ಡಿಸಿಎಂ ಗೋವಿಂದ ಕಾರಜೋಳ

By

Published : Jul 8, 2021, 8:25 PM IST

ಬೆಳಗಾವಿ:ಕೇಂದ್ರ ಸಂಪುಟದಲ್ಲಿ ರಾಜ್ಯಕ್ಕೆ ನೀಡಿದ ನಾಲ್ಕು ಸಚಿವ ಸ್ಥಾನ ಊಟಕ್ಕಿಲ್ಲದ ಉಪ್ಪಿನಕಾಯಿ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಇದೀಗ ಡಿಸಿಎಂ ಗೋವಿಂದ​ ಕಾರಜೋಳ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ

ನಗರದ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯರಿಂದ ಯಾವಾಗಲೂ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ನಡೆಯುತ್ತದೆ. ತಾವು ಆಡಳಿತದಲ್ಲಿದ್ದಾಗ ರಾಜ್ಯಕ್ಕೆ‌ ನೀವೆಷ್ಟು ಮಂತ್ರಿ ಸ್ಥಾನ ಕೊಟ್ಟಿದ್ದೀರಿ ಎಂದು ಕಾಂಗ್ರೆಸ್ ನಾಯಕರು ಹೇಳಲಿ ಎಂದು ಕುಟುಕಿದರು.

ಎಲ್ಲರೂ ಸೇರಿ ಕೆಲಸ ಮಾಡಬೇಕು:ಸಂಪುಟ ವಿಸ್ತರಣೆಯಲ್ಲಿ ಪ್ರಮುಖ ಇಲಾಖೆಗಳು ನಮ್ಮ ರಾಜ್ಯಕ್ಕೆ ಸಿಕ್ಕಿವೆ. ಶೋಭಾ ಕರಂದ್ಲಾಜೆ ಸೇರಿ ನಾಲ್ವರಿಗೂ ಮಹತ್ವದ ಖಾತೆಯನ್ನೇ ವಹಿಸಲಾಗಿದೆ. ಇಲಾಖೆ ಮುಖ್ಯವಲ್ಲ, ಅದರಲ್ಲಿ ನಮ್ಮನ್ನು ತೊಡಗಿಸಿಕೊಳ್ಳುವುದು ಮುಖ್ಯ. ರಾಜ್ಯದ ಅಭಿವೃದ್ಧಿಗಾಗಿ ಎಲ್ಲರೂ ಸೇರಿ ಕೆಲಸ ಮಾಡಬೇಕು ಎಂದರು.

ಓದಿ:ಮೋದಿ ಮಾದರಿಯಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಸಿಎಂ ಬಿಎಸ್​ವೈ ಚಿಂತನೆ

For All Latest Updates

TAGGED:

ABOUT THE AUTHOR

...view details