ಬೆಂಗಳೂರು: ಭಾರತದಲ್ಲಿ ಹಲಾಲ್ ನಿಷೇಧ ಆಗಬೇಕು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ. ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಹಲಾಲ್ ನಿಷೇಧಿಸುವ ಸಂಬಂಧ ಪ್ರತಿಕ್ರಿಯಿಸಿ, ಹಲಾಲ್ ಭಾರತದಲ್ಲಿ ಬ್ಯಾನ್ ಆಗಬೇಕು. ಅದು ನಮ್ಮ ದೇಶದ ಸಂಸ್ಕೃತಿ ಅಲ್ಲ ಎಂದಿದ್ದಾರೆ.
ಸಿಎಂ ಬೊಮ್ಮಾಯಿ ಅವರು ಒಂದು ಹೆಜ್ಜೆ ಹಿಂದಿಟ್ಟು ಮುಂದೆ ಜಿಗಿಯುತ್ತಾರೆ. ಅವರು ಒಂದು ಹೆಜ್ಜೆ ಹಿಂದೆ ಇಟ್ಟಿದ್ದಾರೆ ಎಂದರೆ ಅದು ನಿರ್ಣಯ ಆದಂತೆ ಎಂದು ಸೂಚ್ಯವಾಗಿ ತಿಳಿಸಿದ್ದಾರೆ. ಚಳಿಗಾಲ ಅಧಿವೇಶನದ ಎರಡನೇ ದಿನದ ಕಲಾಪದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಲಾಲ್ ನಿಷೇಧಿಸುವ ಖಾಸಗಿ ಬಿಲ್ಗೂ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ವಿಜಯಪುರ ಶಾಸಕ ತಿಳಿಸಿದರು.