ಚಿಕ್ಕೋಡಿ: ಕೋವಿಡ್-19 ನಿಯಂತ್ರಿಸಲು ಕರ್ನಾಟಕ - ಮಹಾರಾಷ್ಟ್ರ ಗಡಿಯಲ್ಲಿರುವ ನಿಪ್ಪಾಣಿ ಪಟ್ಟಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಸಿಪಿಐ ಸಂತೋಷ ಸತ್ಯನಾಯಿಕ ಅವರ ನೇತೃತ್ವದಲ್ಲಿ ಅನಗತ್ಯವಾಗಿ ಓಡಾಡುವ ಜನರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತಿದೆ.
ಸರ್ಕಾರದ ಆದೇಶವನ್ನು ಇಂತಹ ಸಮಯದಲ್ಲಿ ಪ್ರತಿಯೊಬ್ಬರೂ ಪಾಲಿಸಬೇಕು. ಸಾರ್ವಜನಿಕರು ಇದಕ್ಕೆ ಸ್ಪಂದಿಸಿದರೆ ಮಾತ್ರ ಕೊರೊನಾ ಮಹಾಮಾರಿಯನ್ನು ತಡೆಗಟ್ಟಲು ಸಾಧ್ಯ ಎಂದು ಸಿಪಿಐ ತಿಳಿಸಿದರು.