ಕರ್ನಾಟಕ

karnataka

By

Published : Aug 10, 2023, 9:24 PM IST

ETV Bharat / state

ಹಿಂಡಲಗಾ ಕೈದಿಗಳ ಮಾರಾಮಾರಿ‌ ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಹಿಂಡಲಗಾ ಕೈದಿಗಳ ಮಾರಾಮಾರಿ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

Hindalaga prisoners brawl case
ಹಿಂಡಲಗಾ ಕೈದಿಗಳ ಮಾರಾಮಾರಿ‌ ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಬೆಳಗಾವಿ:ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಬ್ಬರು ಹೊಡೆದಾಡಿಕೊಂಡ ಪ್ರಕರಣದ ಹಿನ್ನೆಲೆಯಲ್ಲಿ ಇಬ್ಬರು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಉತ್ತರ ವಲಯದ ಕಾರಾಗೃಹಗಳ ಉಪಮಹಾನಿರೀಕ್ಷಕ ಟಿ.ಪಿ.ಶೇಷ ಆದೇಶ ಹೊರಡಿಸಿದ್ದಾರೆ. ಹಿರಿಯ ವೀಕ್ಷಕ ಬಿ.ಎಲ್‌.ಮೆಳವಂಕಿ, ವೀಕ್ಷಕ ವಿ.ಟಿ.ವಾಘಮೋರೆ ಅಮಾನತುಗೊಂಡವರು. ಇಬ್ಬರು ಕೈದಿಗಳ ಮಧ್ಯೆ ಗಲಾಟೆ ನಡೆಯದಂತೆ ನೋಡಿಕೊಳ್ಳುವಲ್ಲಿ ಸಿಬ್ಬಂದಿ ವಿಫಲವಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿತ್ತು. ಹಾಗಾಗಿ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಪ್ರಕರಣದ ಹಿನ್ನೆಲೆ:ಕೊಲೆ ಪ್ರಕರಣದ ವಿಚಾರಣೆ ಎದುರಿಸುತ್ತಿರುವ ಸಾಯಿಕುಮಾರ್‌ ಮತ್ತು ಪ್ರಕರಣವೊಂದರಲ್ಲಿ ಶಿಕ್ಷೆ ಅನುಭವಿಸುತ್ತಿರುವ ಶಂಕರಪ್ಪ ಕೊರವರ ಮಧ್ಯೆ ಜುಲೈ 29ರಂದು ಗಲಾಟೆ ನಡೆದಿತ್ತು. ಮಂಡ್ಯ ಮೂಲದ ಸಾಯಿಕುಮಾರ್‌ಗೆ ಶಂಕರಪ್ಪ ಕೊರವರ ಬಲವಾಗಿ ಹಲ್ಲೆ ಮಾಡಿದ್ದ. ಸ್ಕ್ರೂಡ್ರೈವರ್‌ನಿಂದ ಎದೆಗೆ ಐದು ಬಾರಿ ಚುಚ್ಚಿದ್ದ. ಸಾಯಿಕುಮಾರ್‌ಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ಮರು ಹೊಡೆತದಿಂದ ಶಂಕರಪ್ಪ ಕೂಡಾ ಗಾಯಗೊಂಡಿದ್ದ. ಇಬ್ಬರೂ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು.

ಇದೀಗ ಬೆಳಗಾವಿ ಜಿಲ್ಲಾಸ್ಪತ್ರೆ ಮುಂದೆ ಪೊಲೀಸ್​ ಬಂದೋಬಸ್ತ್ ವಹಿಸಲಾಗಿದೆ. ಹಿಂಡಲಗಾ ಜೈಲಿನಲ್ಲಿ ನಡೆದಿದ್ದ ಈ ಗಲಾಟೆ ತೀವ್ರ ಟೀಕೆಗೆ ಗ್ರಾಸವಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹಿರಿಯ ಅಧಿಕಾರಿಗಳು ಕಾನೂನು ಕ್ರಮ ತೆಗೆದುಕೊಂಡಿದ್ದಾರೆ.

ಇತ್ತೀಚಿನ ಪ್ರಕರಣ- ಕಾರಾಗೃಹದಲ್ಲಿ ಕೈದಿಗಳ ನಡುವೆ ಸಂಘರ್ಷ :ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಹಳೆ ವೈಷಮ್ಯದಿಂದ ಕೈದಿಗಳ ಮಧ್ಯೆ (ಜುಲೈ 29-2021) ಮಾರಾಮಾರಿ ಜರುಗಿತ್ತು. ಓರ್ವ ಕೈದಿ ಗಾಯಗೊಂಡಿದ್ದರು. ಸಲ್ಮಾನ್ (24) ಗಾಯಗೊಂಡ ಕೈದಿ ಎಂದು ತಿಳಿದುಬಂದಿತ್ತು. ಈತ ಅಂದು ಗಾಂಜಾ ಮಾರಾಟ ಪ್ರಕರಣದಲ್ಲಿ ಕಾರಾಗೃಹ ಸೇರಿದ್ದ. ಆರೋಪಿ ಮೇಲೆ ಹಳೆ ವೈಷಮ್ಯದ ಕಾರಣಕ್ಕೆ ಈಗಾಗಲೇ ಅರೆಸ್ಟ್‌ ಆಗಿದ್ದ ಸುಕ್ಕ ಕಲೀಂ ಮತ್ತು ಗೌಸ್ ಎಂಬವರು ಹಲ್ಲೆ ನಡೆಸಿದ್ದರು. ಪರಿಣಾಮ ಸಲ್ಮಾನ್ ಮೂಗಿಗೆ ಗಾಯವಾಗಿತ್ತು. ಕಾರಾಗೃಹದ ಸಿಬ್ಬಂದಿ ಜಗಳ ಬಿಡಿಸಿದ್ದರು.

ಹಲ್ಲೆ ನಡೆಸಿದವರು ಸಲ್ಮಾನ್ ಕುಟುಂಬದವರಿಗೆ ಕರೆ ಮಾಡಿ ಆತನನ್ನು ಕೊಲೆ ಮಾಡುವುದಾಗಿ ಹೇಳಿದ್ದರು. ಇದನ್ನರಿತ ಆತನ ಕುಟುಂಬಸ್ಥರು ತುಂಗಾ ನಗರ ಪೊಲೀಸ್ ಠಾಣೆಗೆ ದೂರು‌ ಕೊಡಲು ಹೋಗಿದ್ದರು. ಕೆಲವರು ಕಾರಾಗೃಹದ ಮುಂದೆ ಹೋಗಿ ಜಗಳ ಮಾಡಲು ಮುಂದಾಗಿದ್ದಾರೆ. ಅಷ್ಟರಲ್ಲಿ ತುಂಗಾ ನಗರ ಸಿಪಿಐ ದೀಪಕ್ ಕಾರಾಗೃಹದ ಬಳಿ ಗಲಾಟೆ ಮಾಡುತ್ತಿದ್ದವರನ್ನು ವಶಕ್ಕೆ ಪಡೆದುಕೊಂಡರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಶತಮಾನದ ಸಂಭ್ರಮದಲ್ಲಿ ಬೆಳಗಾವಿ ಹಿಂಡಲಗಾ ಜೈಲು.. ರಾಜ್ಯದಲ್ಲಿ ಕೈದಿಗಳನ್ನು ನೇಣಿಗೇರಿಸುವ ಏಕೈಕ ಕಾರಾಗೃಹವಿದು..!

ABOUT THE AUTHOR

...view details