ಚಿಕ್ಕೋಡಿ :ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದ್ದ ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ ಘಟನೆ ಖಂಡಿಸಿ ಹುಕ್ಕೇರಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಡಾ. ಅಂಬೇಡ್ಕರ ಜನ ಜಾಗೃತಿ ಸಂಘಟನೆಯಿಂದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಮಾಡಿದರು.
ದಲಿತ ಯುವಕನ ಬೆತ್ತಲೆ ಮೆರವಣಿಗೆ: ಹುಕ್ಕೇರಿಯಲ್ಲಿ ಬೃಹತ್ ಪ್ರತಿಭಟನೆ
ದಲಿತ ವ್ಯಕ್ತಿಯನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿದವರಿಗೆ ಉಗ್ರ ಶಿಕ್ಷೆ ನೀಡುವಂತೆ ಒತ್ತಾಯಿಸಿ ಮತ್ತು ಹುಕ್ಕೇರಿ ಪಟ್ಟಣದಲ್ಲಿ ದಲಿತರನ್ನು ಕಡೆಗಣಿಸಲಾಗುತ್ತಿದ್ದು ಗುತ್ತಿಗೆ ಆಧಾರಿತ ಕೆಲಸಗಳು ನಿಂತಿವೆ ಎಂದು ಡಾ. ಅಂಬೇಡ್ಕರ ಜನ ಜಾಗೃತಿ ಸಂಘಟನೆಯಿಂದ ಪ್ರತಿಭಟನೆ.
ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ ಖಂಡಿಸಿ ಹುಕ್ಕೇರಿಯಲ್ಲಿ ಬೃಹತ್ ಪ್ರತಿಭಟನೆ
ದಲಿತ ವ್ಯಕ್ತಿಯನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿದವರಿಗೆ ಉಗ್ರ ಶಿಕ್ಷೆ ನೀಡುವಂತೆ ಒತ್ತಾಯಿಸಿ ಮತ್ತು ಹುಕ್ಕೇರಿ ಪಟ್ಟಣದಲ್ಲಿ ದಲಿತರನ್ನು ಕಡೆಗಣಿಸಲಾಗುತ್ತಿದ್ದು ಗುತ್ತಿಗೆ ಆಧಾರಿತ ಕೆಲಸಗಳು ನಿಂತಿವೆ, ಇದಕ್ಕೆ ಮೇಲಾಧಿಕಾರಿಗಳೆ ಕಾರಣ ಎಂದು ಆರೋಪಿಸಿ, ಮುಂದಿನ ದಿನಮಾನಗಳಲ್ಲಿ ಹೀಗೆ ಮುಂದುವರೆದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.