ಅಥಣಿ: ಸತತ ಮೂರು ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಆರಿಸಿ ಬಂದಿದ್ದೇನೆ, ಸಿಎಂ ಬೊಮ್ಮಾಯಿ ಸರ್ಕಾರದಲ್ಲಿ ನಾನು ಸಚಿವನಾಗಿ ಕೆಲಸ ಮಾಡಬೇಕೆಂಬ ಆಸೆ ಇದೆ, ನಾನೂ ಸಚಿವ ಸ್ಥಾನದ ಆಕಾಂಕ್ಷಿ ಎಂದು ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಸಚಿವರಾಗುವ ಬಯಕೆ ವ್ಯಕ್ತಪಡಿಸಿದ್ದಾರೆ.
ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ: ರಾಯಭಾಗ ಶಾಸಕ ದುರ್ಯೋಧನ ಐಹೊಳೆ - Duryodhana Aihole latest news
ನಮ್ಮ ಕ್ಷೇತ್ರದ ಜನರು ಹಾಗೂ ಹಲವಾರು ಮಠಾಧೀಶರು ನನಗೆ ಸಚಿವ ಸ್ಥಾನ ನೀಡುವಂತೆ ಆಶಯ ವ್ಯಕ್ತಪಡಿಸಿದ್ದಾರೆ. ಅದರಂತೆ ನನಗೂ ಈ ಬಾರಿ ಅವಕಾಶ ಸಿಗಬಹುದು ಎಂಬ ಆಸೆಯಲ್ಲಿ ಇದ್ದೇನೆ ಎಂದು ಶಾಸಕ ದುರ್ಯೋಧನ ಐಹೊಳೆ ಹೇಳಿದ್ದಾರೆ.
![ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ: ರಾಯಭಾಗ ಶಾಸಕ ದುರ್ಯೋಧನ ಐಹೊಳೆ I am also a ministerial aspirant: Duryodhana Aihole](https://etvbharatimages.akamaized.net/etvbharat/prod-images/768-512-12624263-thumbnail-3x2-nin.jpg)
ಅಥಣಿ ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ರಾಯಬಾಗ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿದ್ದೇನೆ. ಸದ್ಯ ನಮ್ಮ ಕ್ಷೇತ್ರದ ಜನರು ಹಾಗೂ ಹಲವಾರು ಮಠಾಧೀಶರು, ಸಚಿವ ಸ್ಥಾನ ನಿಡುವಂತೆ ಸರ್ಕಾರಕ್ಕೆ ಆಶಯ ವ್ಯಕ್ತಪಡಿಸಿದ್ದಾರೆ. ಅದರಂತೆ ನನಗೂ ಈ ಬಾರಿ ಅವಕಾಶ ಸಿಗಬಹುದು ಎಂಬ ಆಸೆಯಲ್ಲಿದ್ದೇನೆ. ರಾಯಭಾಗ ಕ್ಷೇತ್ರದ ಮತ್ತು ಸಮಗ್ರ ಉತ್ತರ ಕರ್ನಾಟಕ ಅಭಿವೃದ್ಧಿಗೆ ನಾನು ಶ್ರಮಿಸುತ್ತೆನೆ. ನನಗೆ ಈ ಬಾರಿ ಅವಕಾಶ ಸಿಗಬಹುದು ನಾನು ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿದರು.
ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಮಾದಿಗ ಸಮುದಾಯ ಆಶಯವಾಗಿತ್ತು, ಸದ್ಯ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾರೆ. ಸಂತೋಷವಾಗಿದೆ ಮತ್ತು ಗೋವಿಂದ ಕಾರಜೋಳ ಅವರಿಗೆ ಮತ್ತೆ ಡಿಸಿಎಂ ಸ್ಥಾನದಲ್ಲಿ ಮುಂದುವರೆಸಲಿ ನಮ್ಮ ಆಶಯ. ಈ ಸಂಬಂಧ ವೈಯಕ್ತಿಕವಾಗಿ ಹೈಕಮಾಂಡ್ಗೆ ಮನವಿ ಮಾಡಿಕೊಳ್ಳುತ್ತೇನೆ ಎಂದರು.