ಬೆಳಗಾವಿ:ಕುಂದಗೋಳ ಚುನಾವಣೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್, ಪಕ್ಷದ ಶಿಸ್ತಿನ ಶಿಪಾಯಿಯಾಗಿ ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವುದಾಗಿ ತಿಳಿಸಿದ್ದಾರೆ.
ಕೃಷ್ಣಾ ನದಿ ನೀರು ಹಂಚಿಕೆ ಸಮಸ್ಯೆ ಪರಿಹಾರಕ್ಕಾಗಿ ನಡೆದ ಸಭೆ ಬಳಿಕ ಮಾತನಾಡಿದ ಅವರು, ಕುಂದಗೋಳ ಚುನಾವಣೆ ವಿಷಯದಲ್ಲಿ ಪಕ್ಷ ನನ್ನನ್ನು ಕೆಲಸ ಮಾಡಲು ಕಳುಹಿಸಿದೆ. ಅದನ್ನು ಪ್ರಾಮಾಣಿಕವಾಗಿ ಮಾಡುವೆ, ಸೋಲು-ಗೆಲುವಿನ ಬಗ್ಗೆ ಮುಂದೆ ನೋಡೋಣ ಎಂದರು.