ಕರ್ನಾಟಕ

karnataka

ಬಿಜೆಪಿಯವರು ನನ್ನೂ ಸೇರಿ ಸೋನಿಯಾ, ರಾಹುಲ್ ಗಾಂಧಿಯನ್ನು​​ ಕ್ರಿಮಿನಲ್ ಮಾಡಿದ್ದಾರೆ: ಡಿಕೆಶಿ

By

Published : Nov 7, 2022, 3:39 PM IST

ಬಿಜೆಪಿಯವರು ನನ್ನೂ ಕ್ರಿಮಿನಲ್ ಮಾಡಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿಯನ್ನೂ ಸಹ ಕ್ರಿಮಿನಲ್ ಮಾಡಿದ್ದಾರೆ. ಯಾರನ್ನು ಕಂಡ್ರೆ ಅವರಿಗೆ ಹೆದರಿಕೆ ಇರುತ್ತೋ ಅವರ ಮೇಲೆ ಕೇಸ್​ಗಳನ್ನ ಹಾಕುವುದು, ತೊಂದರೆ ಕೊಡುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​

ಬೆಳಗಾವಿ: ಬಿಜೆಪಿಯವರು ನನ್ನನ್ನೂ ಕ್ರಿಮಿನಲ್ ಮಾಡಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿಯನ್ನೂ ಸಹ ಕ್ರಿಮಿನಲ್ ಮಾಡಿದ್ದಾರೆ. ರಾಜಕೀಯವಾಗಿ ಯಾರು ಬೆಳೆಯುತ್ತಾರೆ, ಪ್ರಬಲವಾಗಿ ಯಾರು ಇರುತ್ತಾರೆ ಅಂತವರನ್ನು ಕ್ರಿಮಿನಲ್ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಹೇಳಿದ್ದಾರೆ.

ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿನಯ ಕುಲಕರ್ಣಿ ಹುಟ್ಟುಹಬ್ಬ ಹಿನ್ನೆಲೆ ಪಕ್ಷದ ಸಂಘಟನೆ ದೃಷ್ಟಿಯಿಂದ ನಾಯಕರು, ಅವರ ಅಭಿಮಾನಿಗಳು, ಕಾರ್ಯಕರ್ತರು ಹುಟ್ಟುಹಬ್ಬ ಮಾಡುತ್ತಿದ್ದಾರೆ. ಧಾರವಾಡಕ್ಕೆ ಹೋಗಲು ಕೋರ್ಟ್​ ನಿರ್ಬಂಧ ಹೇರಿದೆ. ಹೀಗಾಗಿ ಅವರ ಕ್ಷೇತ್ರದಲ್ಲಿ ಕಾರ್ಯಕ್ರಮ ಮಾಡ್ತಿದ್ದಾರೆ ಎಂದರು.

ವಿನಯ್​ ಕುಲಕರ್ಣಿಗೆ ಬೆಳಗಾವಿ ಜವಾಬ್ದಾರಿ:ಹುಟ್ಟುಹಬ್ಬ ಆಚರಣೆಯಲ್ಲಿ ಒಬ್ಬೊಬ್ಬರದ್ದು ಒಂದೊಂದು ಶೈಲಿ ಇರುತ್ತದೆ‌. ನಾನು ಕೇದಾರನಾಥಕ್ಕೆ ಹೋಗಿದ್ದೆ, ಒಬ್ಬೊಬ್ಬರು ಆಸ್ಪತ್ರೆಗೆ ಹೋಗಿ ಹಣ್ಣು ಹಂಪಲು ಕೊಟ್ಟು ಆಚರಿಸ್ತಾರೆ. ಆಗಸ್ಟ್​​ 3ನೇ ತಾರೀಖು ಸಿದ್ದರಾಮಯ್ಯನವ್ರ ಜನ್ಮದಿನವನ್ನು ಅವರ ಅಭಿಮಾನಿಗಳು ಆಚರಿಸಿದ್ರು. ಮಾಜಿ ಸಚಿವ ವಿನಯ್ ಕುಲಕರ್ಣಿ ಎರಡ್ಮೂರು ಬಾರಿ ಶಾಸಕರಾಗಿದ್ದವರು. ಕಾರ್ಯಕರ್ತರ ಭಾವನೆಗೆ ಅನುಗುಣವಾಗಿ ಹುಟ್ಟುಹಬ್ಬ ಆಚರಣೆ ಮಾಡುತ್ತಿದ್ದಾರೆ. ವಿನಯ್ ಕುಲಕರ್ಣಿಗೆ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ, ಬೆಳಗಾವಿ ಜಿಲ್ಲೆ ಜವಾಬ್ದಾರಿ ಕೊಟ್ಟಿದ್ದೇವೆ ಎಂದು ಹೇಳಿದರು.

ಕೊಲೆ ಆರೋಪಿ‌, ಕ್ರಿಮಿನಲ್ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡ್ತಿದ್ದಾರೆ ಎಂಬ ಬಿಜೆಪಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ನನ್ನೂ ಕ್ರಿಮಿನಲ್ ಮಾಡಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿಯನ್ನೂ ಸಹ ಕ್ರಿಮಿನಲ್ ಮಾಡಿದ್ದಾರೆ. ರಾಜಕೀಯವಾಗಿ ಯಾರು ಬೆಳೆಯುತ್ತಾರೋ, ಹಾಗೆ ಪ್ರಬಲವಾಗಿ ಇರುವವರನ್ನು ಕ್ರಿಮಿನಲ್ ಮಾಡಿದ್ದಾರೆ. ಯಾರನ್ನು ಕಂಡ್ರೆ ಅವರಿಗೆ ಹೆದರಿಕೆ ಇರುತ್ತೋ ಅವರ ಮೇಲೆ ಕೇಸ್​ಗಳನ್ನು ಹಾಕ್ತಾರೆ, ತೊಂದರೆ ಕೊಡುತ್ತಾರೆ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​

ಸಿಎಂ ಕ್ರಮ ಸ್ವಾಗತಿಸಿದ ಡಿಕೆಶಿ:ಡಿಕೆಶಿ ಇಂಧನ ಸಚಿವರಿದ್ದಾಗ ನಡೆದ ಭ್ರಷ್ಟಾಚಾರ ಬಗ್ಗೆ ತನಿಖೆ ಮಾಡ್ತೇವೆ ಎಂಬ ಸಿಎಂ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಗಳ ಕ್ರಮವನ್ನು ಸ್ವಾಗತ ಮಾಡುತ್ತೇನೆ. ನಾನೇನೂ ಕಣ್ಣು ಮುಚ್ಚಿ ಕುಳಿತುಕೊಂಡಿಲ್ಲ. ಇಂಧನ ಸಚಿವರು, ಜಲಸಂಪನ್ಮೂಲ ಸಚಿವರು ಬಿಜೆಪಿ ಆಡಳಿತದಲ್ಲಿ ಏನೇನೋ ಗುತ್ತಿಗೆ ಕೊಟ್ಟಿದ್ದಾರೆ. ಸಾವಿರ ಕೋಟಿ ಇರೋದನ್ನು ಸಾವಿರದ ಮುನ್ನೂರು ಕೋಟಿ ಮಾಡಿದ್ದಾರೆ. ಮುನ್ನೂರು ಕೋಟಿ ಇರೋದನ್ನು ಏಳನೂರು ಕೋಟಿ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲೂ ಇದರ ಬಗ್ಗೆ ಸಾಕಷ್ಟು ಉದಾಹರಣೆಗಳಿವೆ. ಸಮಯ ಬಂದಾಗ ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದು ಡಿಕೆಶಿ ಹೇಳಿದರು.

ಇದನ್ನೂ ಓದಿ:ನ್ಯಾಷನಲ್ ಹೆರಾಲ್ಡ್ ಕೇಸ್: ಪೂರ್ವ ನಿಯೋಜಿತ ಕಾರ್ಯಕ್ರಮ ಕಾರಣ ನೀಡಿ ಇಡಿ ವಿಚಾರಣೆಗೆ ಡಿಕೆಶಿ ಗೈರು

ಮಾಜಿ ಸಚಿವ ಜನಾರ್ದನ್ ರೆಡ್ಡಿ ಕಾಂಗ್ರೆಸ್ ಪಕ್ಷಕ್ಕೆ ಬರ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ನನ್ನ ಹತ್ರಾ ಅಂತೂ ಸಂಪರ್ಕ ಮಾಡಿಲ್ಲ. ಬೇರೆಯವರು ಬಹಳ ಜನ ಸಂಪರ್ಕದಲ್ಲಿದ್ದಾರೆ‌. ಕೆಲವರು ಪಕ್ಷಕ್ಕೆ ಅರ್ಜಿ ಹಾಕುವವರಿದ್ದಾರೆ, ಬಂದಾಗ ಜಿಲ್ಲಾವಾರು ಲಿಸ್ಟ್ ಬಿಡುಗಡೆ ಮಾಡ್ತೇವಿ. ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತದಲ್ಲಿ ನಂಬಿಕೆ ಇದ್ದವರು ಅರ್ಜಿ ಹಾಕಲಿ, ಆಮೇಲೆ ನೋಡೋಣ ಎಂದರು‌.

ABOUT THE AUTHOR

...view details