ಕರ್ನಾಟಕ

karnataka

ETV Bharat / state

ನೆರೆಯ ಮಹಾರಾಷ್ಟ್ರದಲ್ಲಿ ಭಾರಿ ಮಳೆ; ಚಿಕ್ಕೋಡಿಯಲ್ಲಿ ಮತ್ತೆ ಪ್ರವಾಹ ಭೀತಿ - Flood threat in Chikkodi

ನೆರೆಯ ಮಹಾರಾಷ್ಟ್ರದಲ್ಲಿ ಭಾರಿ ಮಳೆ- ಚಿಕ್ಕೋಡಿಯಲ್ಲಿ ನದಿಗಳ ನೀರಿನ ಮಟ್ಟ ಹೆಚ್ಚಳ- ಗಡಿ ಜಿಲ್ಲೆಯ ಜನರಿಗೆ ಮತ್ತೆ ಪ್ರವಾಹ ಭೀತಿ

increase-in-water-level-of-rivers-in-chikkodi
ನೆರೆಯ ಮಹಾರಾಷ್ಟ್ರದಲ್ಲಿ ಭಾರೀ ಮಳೆ; ಚಿಕ್ಕೋಡಿಯಲ್ಲಿ ಮತ್ತೆ ಪ್ರವಾಹ ಭೀತಿ..!

By

Published : Jul 6, 2022, 4:08 PM IST

ಬೆಳಗಾವಿ :ನೆರೆಯ ರಾಜ್ಯ ಕಳೆದ ಮೂರು ದಿನಗಳಿಂದ ಮಹಾರಾಷ್ಟ್ರ ಸೇರಿ ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಮಹಾರಾಷ್ಟ್ರದಲ್ಲಿ ಈ ಬಾರಿಯೂ ಭಾರಿ ಪ್ರಮಾಣದಲ್ಲಿ ಮಳೆ ಅಬ್ಬರಿಸುತ್ತಿದೆ. ಹೀಗಾಗಿ ಅಲ್ಲಿನ ಹಲವು ಬ್ಯಾರೇಜ್​ಗಳು ತುಂಬಿ ಹರಿಯುತ್ತಿವೆ. ಇತ್ತ ಗಡಿಯಲ್ಲಿರುವ ಚಿಕ್ಕೋಡಿ ಉಪವಿಭಾಗದ ನದಿಗಳ ನೀರಿನ ಮಟ್ಟವೂ ಹೆಚ್ಚಾಗುತ್ತಿದ್ದು, ಮತ್ತೆ ಪ್ರವಾಹದ ಭೀತಿ ಎದುರಾಗಿದೆ.

ನೆರೆಯ ಮಹಾರಾಷ್ಟ್ರದಲ್ಲಿ ಭಾರೀ ಮಳೆ; ಚಿಕ್ಕೋಡಿಯಲ್ಲಿ ಮತ್ತೆ ಪ್ರವಾಹ ಭೀತಿ

ಮಳೆ ಆರ್ಭಟದ ಪರಿಣಾಮ ರಾಧಾನಗರಿ ಡ್ಯಾಂನದ ಪಂಚಗಂಗಾ ನದಿಗಳಿಗೆ 12ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ನೀರಿನ ಮಟ್ಟ ಒಂದೇ ರಾತ್ರಿಯಲ್ಲಿ 7 ಅಡಿಗಳಷ್ಟು ಏರಿಕೆಯಾಗಿದೆ. ಕೊಲ್ಲಾಪುರ ಜಿಲ್ಲೆಯ ರಾಜಾರಾಮ ಬ್ಯಾರೇಜ್ ಸೇರಿದಂತೆ ಒಟ್ಟು 27 ಬ್ಯಾರೇಜ್​ಗಳು ಜಲಾವೃತವಾಗಿವೆ. ಮತ್ತೊಂದೆಡೆ ಕೊಯ್ನಾ ಅಣೆಕಟ್ಟು ಪ್ರದೇಶದಲ್ಲೂ ಭಾರಿ ಮಳೆಯಾಗುತ್ತಿದೆ. ಕೊಯ್ನಾ ಡ್ಯಾಂನಲ್ಲಿ ಕಳೆದ 24ಗಂಟೆಗಳಲ್ಲಿ 2 ಟಿಎಂಸಿ ನೀರು ಸಂಗ್ರಹವಾಗಿದೆ. ಕೊಂಕಣದ ಎಲ್ಲ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ.

ಮಹಾರಾಷ್ಟ್ರ ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಚಿಕ್ಕೋಡಿ ತಾಲೂಕಿನ ಕೃಷ್ಣಾ, ದೂಧಗಂಗಾ, ವೇದಗಂಗಾ ನದಿಗಳ ನೀರಿನ ಮಟ್ಟ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿವೆ. ಹೀಗೆ ಮಳೆ ಮುಂದುವರಿದರೆ ಚಿಕ್ಕೋಡಿ ತಾಲೂಕಿನಲ್ಲಿ ಪ್ರವಾಹದ ಪರಿಸ್ಥಿತಿ ಎದುರಾಗಲಿದೆ. ಸದ್ಯ ಚಿಕ್ಕೋಡಿ ಉಪವಿಭಾಗದ ಅಧಿಕಾರಿಗಳು ಮಹಾರಾಷ್ಟ್ರ ರಾಜ್ಯದ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅಲ್ಲಿನ ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದಾರೆ.

ಪ್ರವಾಹದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಚಿಕ್ಕೋಡಿ ಉಪವಿಭಾಗದಲ್ಲಿ ಎಸ್ ಡಿಆರ್ ಎಫ್ ಮತ್ತು ಎನ್ ಡಿಆರ್ ಎಫ್ ತಂಡದ ಸಿಬ್ಬಂದಿ ಪ್ರವಾಹ ಪೀಡಿತ ಗ್ರಾಮದಲ್ಲಿ ಬೀಡುಬಿಟ್ಟು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜನೆ ‌ಮಾಡಿದ್ದಾರೆ. ಈ ಕುರಿತು ‌ಪ್ರತಿಕ್ರಿಯೆ ನೀಡಿರುವ ಚಿಕ್ಕೋಡಿ ಎಸಿ ಸಂತೋಷ ಕಾಮಗೌಡ್, ಚಿಕ್ಕೋಡಿ ಉಪವಿಭಾಗದಲ್ಲಿ ಪ್ರವಾಹ ಮುನ್ನೆಚ್ಚರಿಕೆ ಕ್ರಮ ಕೈಕೊಂಡಿದ್ದು, 22 ಜನರ ಎನ್ ಡಿಆರ್ ಎಫ್ ತಂಡ ಆಗಮಿಸಿದೆ. ಅವರಿಗೆ ಸದಲಗಾ ಪಟ್ಟಣದಲ್ಲಿ ಇರಲು ವ್ಯವಸ್ಥೆ ಮಾಡಲಾಗಿದೆ ಎಂದರು.

ಈಗಾಗಲೇ ಹುಕ್ಕೇರಿ, ಅಂಕಲಿ ಹಾಗೂ ನಿಪ್ಪಾಣಿಯಲ್ಲಿ ಎನ್​ಡಿಆರ್ ಎಫ್ ತಂಡದಿಂದ ಜಾಗೃತಿ ಕಾರ್ಯಕ್ರಮ ಮಾಡಲಾಗಿದೆ. ಮುಂಬರುವ ಎರಡು ದಿನಗಳಲ್ಲಿ ಕಾಗವಾಡ, ಚಿಕ್ಕೋಡಿ ತಾಲೂಕುಗಳಲ್ಲಿ ಜಾಗೃತಿ ಮೂಡಿಸಲಾಗುವುದು. ಪ್ರವಾಹ ಬಂದಾಗ ಜನರು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಮತ್ತು ಬೇರೆವರನ್ನು ಹಯಾವ ರೀತಿ ರಕ್ಷಿಸಬೇಕು ಎಂಬ ಬಗ್ಗೆ ಅಣಕು ಪ್ರದರ್ಶನದ ಮೂಲಕ ಜಾಗೃತಿ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಓದಿ :42 ಬಾರಿ ಚಾಕು ಇರಿತ: ಮರಣೋತ್ತರ ಪರೀಕ್ಷೆ ವೇಳೆ ಬಯಲಾಯಿತು ಸತ್ಯ : ಅಂತ್ಯಕ್ರಿಯೆಗೆ ಶವ ರವಾನೆ..

ABOUT THE AUTHOR

...view details