ಬೆಳಗಾವಿ: ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ನಗರದ ಬಸವನ ಕುಡಚಿಯ ನವಗ್ರಹ ದೇವಸ್ಥಾನದಲ್ಲಿ ಅಭಿಷೇಕ, ವಿಶೇಷ ಪೂಜೆ ಸಲ್ಲಿಸಿ ಹಾಗೂ ಸಸಿ ನೆಟ್ಟರು.
ರವಿ ಡಿ.ಚನ್ನಣ್ಣನವರ್ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಅಭಿಮಾನಿಗಳು
ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಹುಟ್ಟುಹಬ್ಬವನ್ನು ಬೆಳಗಾವಿಯಲ್ಲಿ ಅವರ ಅಭಿಮಾನಿಗಳು ವಿಶೇಷವಾಗಿ ಆಚರಿಸಿದ್ದಾರೆ.
ಐಪಿಎಸ್ ರವಿ ಡಿ.ಚನ್ನಣ್ಣನವರ್ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಅಭಿಮಾನಿಗಳು
ಅಧಿಕಾರಿಯ ಅಭಿಮಾನಿ ಬಳಗದಿಂದ 100 ಸಸಿ ನೆಡುವ ಮೂಲಕ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ನವಗ್ರಹ ದೇವಸ್ಥಾನದಲ್ಲಿ ಅಭಿಷೇಕ ಮಾಡಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
ಚೆನ್ನಣ್ಣವರ್ ಸೇವೆ ಹೀಗೆಯೇ ಮುಂದುವರಿಯಲಿ. ನ್ಯಾಯದ ಪರ ಕೆಲಸ ಮಾಡಲಿ, ದೇವರು ಅವರಿಗೆ ಒಳ್ಳೆಯ ಆರೋಗ್ಯ ನೀಡಲಿ ಎಂದು ಅಭಿಮಾನಿಗಳು ದೇವರಲ್ಲಿ ಪ್ರಾರ್ಥಿಸಿದ್ದಾರೆ.