ಕರ್ನಾಟಕ

karnataka

ETV Bharat / state

'ಪಂಚಮಸಾಲಿ ಸಮಾಜವನ್ನು 2 ಎಗೆ ಸೇರಿಸಲು ಆಗ್ರಹಿಸಿ 28ಕ್ಕೆ ಸತ್ಯಾಗ್ರಹ' - Fasting in front of Belgaum Golden Mosque

ನಾವಿಲ್ಲಿ ಬೇರೆ ಯಾವ ಉದ್ದೇಶಕ್ಕೂ ಮೀಸಲಾತಿಯನ್ನು ಕೇಳುತ್ತಿಲ್ಲ. ಪಂಚಮಸಾಲಿ ಸಮಾಜದ ನ್ಯಾಯಯುತ ಹಕ್ಕನ್ನು ಕೇಳುತ್ತಿದ್ದೇವೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಜಯಮೃತ್ಯುಂಜಯ ಶ್ರೀಗಳು ತಿಳಿಸಿದ್ದಾರೆ.

Jayamritunjaya Sri insists on Panchamsali social reservation
ಜಯಮೃತ್ಯುಂಜಯ ಶ್ರೀ

By

Published : Oct 25, 2020, 4:03 PM IST

ಅಥಣಿ: ಪಂಚಮಸಾಲಿ ಸಮಾಜವನ್ನು ರಾಜ್ಯ ಸರ್ಕಾರವು 2ಎಗೆ ಹಾಗೂ ಕೇಂದ್ರ ಸರ್ಕಾರ ಒಬಿಸಿಗೆ ಸೇರಿಸಬೇಕೆಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಜಯಮೃತ್ಯುಂಜಯ ಶ್ರೀಗಳು ಒತ್ತಾಯಿಸಿದ್ದಾರೆ.

ಜಗದ್ಗುರು ಜಯಮೃತ್ಯುಂಜಯ ಶ್ರೀಗಳು

ತಾಲೂಕಿನಲ್ಲಿ ಮಾಧ್ಯಮದೊಂದಿಗೆ ಮಾಹಿತಿ ನೀಡಿದ ಅವರು, ಕರ್ನಾಟದಲ್ಲಿ ಅತಿ ಹೆಚ್ಚು ಪಂಚಮಸಾಲಿ ಸಮಾಜದವರು ವಾಸವಾಗಿದ್ದಾರೆ. ಹೀಗಾಗಿ, ಇವರಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಅವಶ್ಯಕತೆಯಿದೆ. ಹಾಗಾಗಿ ಮೀಸಲಾತಿಗಾಗಿ ಒತ್ತಾಯಿಸಿ ಇದೇ 28ರಂದು ಬೆಳಗಾವಿ ಸುವರ್ಣ ವಿಧಾನಸೌಧ ಎದುರು ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದರು.

For All Latest Updates

ABOUT THE AUTHOR

...view details